<p><strong>ಚಿಕ್ಕಮಗಳೂರು</strong>: ವಿಜಯಪುರ ಬಡಾವಣೆಯಲ್ಲಿ ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ನುಗ್ಗಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಗುಂಪೊಂದು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದು, ಇನ್ನೊಂದೆಡೆ ಇಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಪ್ರತಿ ದೂರು ದಾಖಲಾಗಿದೆ.</p><p>ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ಸುಧಾ ಎಚ್.ಜಿ. ಎಂಬುವರ ಮನೆ ನಗರದ ವಿಜಯಪುರ ಬಡಾವಣೆಯಲ್ಲಿನ ತಾಲ್ಲೂಕು ಪಂಚಾಯಿತಿ ವಸತಿ ಗೃಹದಲ್ಲಿದ್ದು, ಇವರು ನೀಡಿರುವ ದೂರು ಆಧರಿಸಿ 17 ವರ್ಷದ ಬಾಲಕ ಮತ್ತು ಅಫ್ಷದ್ ಎಂಬ ಮತ್ತೊಬ್ಬ ಯುವಕನ ವಿರುದ್ಧ ಬಸವನಹಳ್ಳಿ ಪ್ರಕರಣದಲ್ಲಿ ಪ್ರಕರಣ ದಾಖಲಾಗಿದೆ.</p><p>ಈ ಇಬ್ಬರು ನೀಡಿರುವ ಪ್ರತಿದೂರು ಆಧರಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯನ್ ಮತ್ತು ಬಜರಂಗದಳ ಕಾರ್ಯಕರ್ತ ಶ್ಯಾಂಗೌಡ ವಿರುದ್ಧ ಶಾಂತಿ ಭಂಗ, ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿವೆ.</p>.<p><strong>ಘಟನೆಯ ವಿವರ:</strong> ಸುಧಾ ಎಚ್.ಜಿ. ಎಂಬುವರ ಮನೆಯ ಮುಂದಿನ ರಸ್ತೆಯಲ್ಲಿ ಪದೇ ಪದೇ ಸಂಚರಿಸುತ್ತಿದ್ದ ಯುವಕರು ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮನೆಯಲ್ಲಿ ಮಗಳು ಒಬ್ಬಳೇ ಇದ್ದಾಗ ನುಗ್ಗಲು ಪ್ರಯತ್ನ ಮಾಡಿದ್ದರು ಎಂಬುದು ಮುಸ್ಲಿಂ ಯುವಕರ ಮೇಲಿರುವ ಆರೋಪ.</p><p>ಸೋಮವಾರ ರಾತ್ರಿ ಕೂಡ ಈ ಯುವಕರು ಇದೇ ರಸ್ತೆಯಲ್ಲಿ ಸಾಗಿದಾಗ ಯುವಕರ ಗುಂಪು ಅವರನ್ನು ಅಡ್ಡಗಟ್ಟಿ ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಹಲ್ಲೆಗೆ ಒಳಗಾಗಿದ್ದ ಇಬ್ಬರನ್ನೂ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದರು.</p><p>ಬಳಿಕ ಪೊಲೀಸರಿಗೆ ದೂರು ನೀಡಿರುವ ಸುಧಾ ಅವರು, ‘ಪರಿಶಿಷ್ಟ ಜಾತಿಗೆ ಸೇರಿದ ನಮ್ಮ ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ಮಗಳು ಒಬ್ಬಳೇ ಇದ್ದಾಗ ಮನೆಗೆ ನುಗ್ಗಲು ಯತ್ನಿಸಿದ್ದರು. ಅವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದು ಮನವಿ ಮಾಡಿದರು. ಇಬ್ಬರ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದರು.</p><p>ಮುಸ್ಲಿಂ ಯುವಕ ಮತ್ತು ಬಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ವಿಷಯ ತಿಳಿದ ಕೂಡಲೇ ಮತ್ತೊಂದು ಗುಂಪು ಜಮಾಯಿಸಿ ಅಮಾಯಕರನ್ನು ಬಿಜೆಪಿ ಮತ್ತು ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಎರಡೂ ಕಡೆಯವರು ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಜಮಾಯಿಸಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಎರಡೂ ಕಡೆಯವರನ್ನು ಸಮಾಧಾನ ಮಾಡಿ ವಾಪಸ್ ಕಳುಹಿಸಿದರು.</p><p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಸ್ಲಿಂ ಯುವಕರು ನೀಡಿರುವ ದೂರು ಆಧರಿಸಿ ಸಂತೋಷ್ ಕೋಟ್ಯಾನ್ ಮತ್ತು ಶಾಂಗೌಡ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p><p>ಘಟನೆ ಬಳಿಕ ಮಂಗಳವಾರ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸುಧಾ ಅವರ ಮನೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಘಟನೆ ಬಗ್ಗೆ ಟ್ವೀಟ್ ಮಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ‘ಹಿಂದೂಗಳನ್ನೇ ಕೇಂದ್ರವಾಗಿ ಇರಿಸಿಕೊಂಡು ಗಲಭೆ ಎಬ್ಬಿಸುವ ಒಳಸಂಚು ಮಾಡಲಾಗಿದೆ. ಬಾಲಕರಿಗೆ ಕಲ್ಲು ಎಸೆಯುವ ವಿಕೃತ ಮನಸ್ಥಿತಿ ಬಂದಿರುವುದು ಎಲ್ಲಿಂದ ಎಂಬುದು ಗೊತ್ತಾಗಬೇಕು. ಇದನ್ನು ಸಮರ್ಥನೆ ಮಾಡಿಕೊಂಡವರನ್ನೂ ವಿಚಾರಣೆಗೆ ಒಳಪಡಿಸಬೇಕು. ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವು ಸರಿಯಲ್ಲ. ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ವಿಜಯಪುರ ಬಡಾವಣೆಯಲ್ಲಿ ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ನುಗ್ಗಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಗುಂಪೊಂದು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದು, ಇನ್ನೊಂದೆಡೆ ಇಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಪ್ರತಿ ದೂರು ದಾಖಲಾಗಿದೆ.</p><p>ಸಿಡಿಪಿಒ ಕಚೇರಿಯ ಮೇಲ್ವಿಚಾರಕಿ ಸುಧಾ ಎಚ್.ಜಿ. ಎಂಬುವರ ಮನೆ ನಗರದ ವಿಜಯಪುರ ಬಡಾವಣೆಯಲ್ಲಿನ ತಾಲ್ಲೂಕು ಪಂಚಾಯಿತಿ ವಸತಿ ಗೃಹದಲ್ಲಿದ್ದು, ಇವರು ನೀಡಿರುವ ದೂರು ಆಧರಿಸಿ 17 ವರ್ಷದ ಬಾಲಕ ಮತ್ತು ಅಫ್ಷದ್ ಎಂಬ ಮತ್ತೊಬ್ಬ ಯುವಕನ ವಿರುದ್ಧ ಬಸವನಹಳ್ಳಿ ಪ್ರಕರಣದಲ್ಲಿ ಪ್ರಕರಣ ದಾಖಲಾಗಿದೆ.</p><p>ಈ ಇಬ್ಬರು ನೀಡಿರುವ ಪ್ರತಿದೂರು ಆಧರಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ್ ಕೋಟ್ಯನ್ ಮತ್ತು ಬಜರಂಗದಳ ಕಾರ್ಯಕರ್ತ ಶ್ಯಾಂಗೌಡ ವಿರುದ್ಧ ಶಾಂತಿ ಭಂಗ, ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿವೆ.</p>.<p><strong>ಘಟನೆಯ ವಿವರ:</strong> ಸುಧಾ ಎಚ್.ಜಿ. ಎಂಬುವರ ಮನೆಯ ಮುಂದಿನ ರಸ್ತೆಯಲ್ಲಿ ಪದೇ ಪದೇ ಸಂಚರಿಸುತ್ತಿದ್ದ ಯುವಕರು ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮನೆಯಲ್ಲಿ ಮಗಳು ಒಬ್ಬಳೇ ಇದ್ದಾಗ ನುಗ್ಗಲು ಪ್ರಯತ್ನ ಮಾಡಿದ್ದರು ಎಂಬುದು ಮುಸ್ಲಿಂ ಯುವಕರ ಮೇಲಿರುವ ಆರೋಪ.</p><p>ಸೋಮವಾರ ರಾತ್ರಿ ಕೂಡ ಈ ಯುವಕರು ಇದೇ ರಸ್ತೆಯಲ್ಲಿ ಸಾಗಿದಾಗ ಯುವಕರ ಗುಂಪು ಅವರನ್ನು ಅಡ್ಡಗಟ್ಟಿ ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಹಲ್ಲೆಗೆ ಒಳಗಾಗಿದ್ದ ಇಬ್ಬರನ್ನೂ ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದರು.</p><p>ಬಳಿಕ ಪೊಲೀಸರಿಗೆ ದೂರು ನೀಡಿರುವ ಸುಧಾ ಅವರು, ‘ಪರಿಶಿಷ್ಟ ಜಾತಿಗೆ ಸೇರಿದ ನಮ್ಮ ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ಮಗಳು ಒಬ್ಬಳೇ ಇದ್ದಾಗ ಮನೆಗೆ ನುಗ್ಗಲು ಯತ್ನಿಸಿದ್ದರು. ಅವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ’ ಎಂದು ಮನವಿ ಮಾಡಿದರು. ಇಬ್ಬರ ವಿರುದ್ಧ ಎಸ್ಸಿಎಸ್ಟಿ ದೌರ್ಜನ್ಯ ಕಾಯ್ದೆಯಡಿ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದರು.</p><p>ಮುಸ್ಲಿಂ ಯುವಕ ಮತ್ತು ಬಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ವಿಷಯ ತಿಳಿದ ಕೂಡಲೇ ಮತ್ತೊಂದು ಗುಂಪು ಜಮಾಯಿಸಿ ಅಮಾಯಕರನ್ನು ಬಿಜೆಪಿ ಮತ್ತು ಬಜರಂಗದಳದ ಕಾರ್ಯಕರ್ತರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಎರಡೂ ಕಡೆಯವರು ಪೊಲೀಸ್ ಠಾಣೆ ಎದುರು ಮಧ್ಯರಾತ್ರಿ ಜಮಾಯಿಸಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಎರಡೂ ಕಡೆಯವರನ್ನು ಸಮಾಧಾನ ಮಾಡಿ ವಾಪಸ್ ಕಳುಹಿಸಿದರು.</p><p>ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಸ್ಲಿಂ ಯುವಕರು ನೀಡಿರುವ ದೂರು ಆಧರಿಸಿ ಸಂತೋಷ್ ಕೋಟ್ಯಾನ್ ಮತ್ತು ಶಾಂಗೌಡ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p><p>ಘಟನೆ ಬಳಿಕ ಮಂಗಳವಾರ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಸುಧಾ ಅವರ ಮನೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಘಟನೆ ಬಗ್ಗೆ ಟ್ವೀಟ್ ಮಾಡಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ‘ಹಿಂದೂಗಳನ್ನೇ ಕೇಂದ್ರವಾಗಿ ಇರಿಸಿಕೊಂಡು ಗಲಭೆ ಎಬ್ಬಿಸುವ ಒಳಸಂಚು ಮಾಡಲಾಗಿದೆ. ಬಾಲಕರಿಗೆ ಕಲ್ಲು ಎಸೆಯುವ ವಿಕೃತ ಮನಸ್ಥಿತಿ ಬಂದಿರುವುದು ಎಲ್ಲಿಂದ ಎಂಬುದು ಗೊತ್ತಾಗಬೇಕು. ಇದನ್ನು ಸಮರ್ಥನೆ ಮಾಡಿಕೊಂಡವರನ್ನೂ ವಿಚಾರಣೆಗೆ ಒಳಪಡಿಸಬೇಕು. ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿರುವು ಸರಿಯಲ್ಲ. ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>