<p><strong>ಚಿಕ್ಕಮಗಳೂರು:</strong> ತಿರುಪತಿ–ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.</p><p>ಚಿಕ್ಕಮಗಳೂರಿನಿಂದ ಹೊರಟ ತಿರುಪತಿ ರೈಲಿಗೆ ಚಾಲನೆ ನೀಡಿದ ಅವರು, 'ದತ್ತಾತ್ರೇಯ ಎಕ್ಸ್ಪ್ರೆಸ್, ದತ್ತಪೀಠ ಎಕ್ಸ್ಪ್ರೆಸ್ ಅಥವಾ ದತ್ತಾತ್ರೇಯ – ಶ್ರೀನಿವಾಸ ಎಕ್ಸ್ಪ್ರೆಸ್ ಇವುಗಳಲ್ಲಿ ಯಾವ ಹೆಸರಿಡಬೇಕು ಎಂಬುದನ್ನು ಸಿ.ಟಿ.ರವಿ, ಎಂ.ಕೆ.ಪ್ರಾಣೇಶ್, ಕೋಟ ಶ್ರೀನಿವಾಸ ಪೂಜಾರಿ ಕುಳಿತು ಅಂತಿಮಗೊಳಿಸಿ ಮನವಿ ಸಲ್ಲಿಸಿ. ರೈಲ್ವೆ ಮಂಡಳಿ ಮುಂದೆ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.</p><p>ಹಾಸನ – ಬೇಲೂರು – ಚಿಕ್ಕಮಗಳೂರು ನಡುವಿನ ಹೊಸ ಮಾರ್ಗದಲ್ಲಿ ಇನ್ನು ಎರಡು ವರ್ಷಗಳಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಭೂಸ್ವಾಧೀನ ಪ್ರಕ್ರಿಯೆ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭೂಮಿ ಹಸ್ತಾಂತರ ಆದ ಕೂಡಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.</p><p>ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, 'ತಿರುಪತಿ ರೈಲಿಗೆ ಗುರು ದತ್ತಾತ್ರೇಯರ ಹೆಸರಿಟ್ಟರೆ ಸಾರ್ಥಕವಾಗಲಿದೆ. ಯಾರ ವಿರೋಧವೂ ಬರುವುದಿಲ್ಲ' ಎಂದರು.</p><p>ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, 'ಹಲವು ವರ್ಷಗಳ ಬೇಡಿಕೆ ಈಡೇರಿದೆ. ಹಿಂದೆ ಆಡಳಿತ ನಡೆಸಿದವರು ಕಂಬಿ ಇಲ್ಲದ ರೈಲು ಬಿಡುತ್ತಿದ್ದರು. ಬಿಜೆಪಿ ಸರ್ಕಾರ ಜನರ ಕನಸು ಸಾಕಾರಗೊಳಿಸಿದೆ' ಎಂದರು.</p><p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 'ಚಿಕ್ಕಮಗಳೂರಿನಿಂದ ತಿರುಪತಿಗೆ ಹೋಗುವ ರೈಲು ಮತ್ತೆ 48 ಗಂಟೆಗಳಲ್ಲಿ ವಾಪಸ್ ಬರಲು ಅವಕಾಶ ಮಾಡಬೇಕು. ಚಿಕ್ಕಮಗಳೂರು – ಶೃಂಗೇರಿ – ಉಡುಪಿ – ಕೊಲ್ಲೂರು ಹೊಸ ಮಾರ್ಗದ ಬಗ್ಗೆ ಸಮೀಕ್ಷೆ ನಡೆಸಬೇಕು' ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತಿರುಪತಿ–ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ ದತ್ತಾತ್ರೇಯ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.</p><p>ಚಿಕ್ಕಮಗಳೂರಿನಿಂದ ಹೊರಟ ತಿರುಪತಿ ರೈಲಿಗೆ ಚಾಲನೆ ನೀಡಿದ ಅವರು, 'ದತ್ತಾತ್ರೇಯ ಎಕ್ಸ್ಪ್ರೆಸ್, ದತ್ತಪೀಠ ಎಕ್ಸ್ಪ್ರೆಸ್ ಅಥವಾ ದತ್ತಾತ್ರೇಯ – ಶ್ರೀನಿವಾಸ ಎಕ್ಸ್ಪ್ರೆಸ್ ಇವುಗಳಲ್ಲಿ ಯಾವ ಹೆಸರಿಡಬೇಕು ಎಂಬುದನ್ನು ಸಿ.ಟಿ.ರವಿ, ಎಂ.ಕೆ.ಪ್ರಾಣೇಶ್, ಕೋಟ ಶ್ರೀನಿವಾಸ ಪೂಜಾರಿ ಕುಳಿತು ಅಂತಿಮಗೊಳಿಸಿ ಮನವಿ ಸಲ್ಲಿಸಿ. ರೈಲ್ವೆ ಮಂಡಳಿ ಮುಂದೆ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.</p><p>ಹಾಸನ – ಬೇಲೂರು – ಚಿಕ್ಕಮಗಳೂರು ನಡುವಿನ ಹೊಸ ಮಾರ್ಗದಲ್ಲಿ ಇನ್ನು ಎರಡು ವರ್ಷಗಳಲ್ಲಿ ರೈಲು ಸಂಚಾರ ಆರಂಭವಾಗಲಿದೆ. ಭೂಸ್ವಾಧೀನ ಪ್ರಕ್ರಿಯೆ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭೂಮಿ ಹಸ್ತಾಂತರ ಆದ ಕೂಡಲೇ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.</p><p>ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, 'ತಿರುಪತಿ ರೈಲಿಗೆ ಗುರು ದತ್ತಾತ್ರೇಯರ ಹೆಸರಿಟ್ಟರೆ ಸಾರ್ಥಕವಾಗಲಿದೆ. ಯಾರ ವಿರೋಧವೂ ಬರುವುದಿಲ್ಲ' ಎಂದರು.</p><p>ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, 'ಹಲವು ವರ್ಷಗಳ ಬೇಡಿಕೆ ಈಡೇರಿದೆ. ಹಿಂದೆ ಆಡಳಿತ ನಡೆಸಿದವರು ಕಂಬಿ ಇಲ್ಲದ ರೈಲು ಬಿಡುತ್ತಿದ್ದರು. ಬಿಜೆಪಿ ಸರ್ಕಾರ ಜನರ ಕನಸು ಸಾಕಾರಗೊಳಿಸಿದೆ' ಎಂದರು.</p><p>ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, 'ಚಿಕ್ಕಮಗಳೂರಿನಿಂದ ತಿರುಪತಿಗೆ ಹೋಗುವ ರೈಲು ಮತ್ತೆ 48 ಗಂಟೆಗಳಲ್ಲಿ ವಾಪಸ್ ಬರಲು ಅವಕಾಶ ಮಾಡಬೇಕು. ಚಿಕ್ಕಮಗಳೂರು – ಶೃಂಗೇರಿ – ಉಡುಪಿ – ಕೊಲ್ಲೂರು ಹೊಸ ಮಾರ್ಗದ ಬಗ್ಗೆ ಸಮೀಕ್ಷೆ ನಡೆಸಬೇಕು' ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>