<p><strong>ಚಿಕ್ಕಮಗಳೂರು</strong>: ‘ತ್ರಿಭಾಷಾ ಸೂತ್ರ ನೆಹರೂ ಅವರ ಕನಸು, ಇಂದಿರಾ ಗಾಂಧಿ ಅವರು ಅದಕ್ಕೆ ನೀರೆರೆದರು. ಆದರೆ, ಇದನ್ನು ಈಗಿನ ಕಾಂಗ್ರೆಸ್ನವರು ವಿರೋಧ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೋಮವಾರ ಇಲ್ಲಿ ಆರೋಪಿಸಿದರು.</p>.<p>ಸುದ್ದಿಗಾರರಿಗೆ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಪ್ರಾದೇಶಿಕ ಭಾಷೆಗಳಿಗೆ ಶಕ್ತಿ ತುಂಬುವ ಕೆಲಸವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಮಾಡುತ್ತಿದೆ. ಹಿಂದಿಯು ದೇಶದ ಶೇ 40ರಷ್ಟು ಜನರ ಮಾತೃಭಾಷೆಯಾಗಿದೆ. ಇದನ್ನೂ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>ಕರ್ನಾಟಕದಲ್ಲಿ ಕನ್ನಡವನ್ನೇ ಮೆರೆಸಬೇಕು, ಉಳಿದ ಭಾಷೆಗಳನ್ನೂ ಕಲಿಯಲು ಅವಕಾಶ ಮಾಡಿಕೊಡಬೇಕು. ಕೆಲವರು ಇಂಗ್ಲಿಷ್ ಮೆರೆಸಿ ಕನ್ನಡ ಮರೆಸುತ್ತಿದ್ದಾರೆ. ಅದು ಸರಿಯಲ್ಲ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-51-2100022231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ತ್ರಿಭಾಷಾ ಸೂತ್ರ ನೆಹರೂ ಅವರ ಕನಸು, ಇಂದಿರಾ ಗಾಂಧಿ ಅವರು ಅದಕ್ಕೆ ನೀರೆರೆದರು. ಆದರೆ, ಇದನ್ನು ಈಗಿನ ಕಾಂಗ್ರೆಸ್ನವರು ವಿರೋಧ ಮಾಡುತ್ತಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೋಮವಾರ ಇಲ್ಲಿ ಆರೋಪಿಸಿದರು.</p>.<p>ಸುದ್ದಿಗಾರರಿಗೆ ಮಾತನಾಡಿದ ಅವರು, ‘ಕರ್ನಾಟಕಕ್ಕೆ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಪ್ರಾದೇಶಿಕ ಭಾಷೆಗಳಿಗೆ ಶಕ್ತಿ ತುಂಬುವ ಕೆಲಸವನ್ನು ರಾಷ್ಟ್ರೀಯ ಶಿಕ್ಷಣ ನೀತಿ ಕೂಡ ಮಾಡುತ್ತಿದೆ. ಹಿಂದಿಯು ದೇಶದ ಶೇ 40ರಷ್ಟು ಜನರ ಮಾತೃಭಾಷೆಯಾಗಿದೆ. ಇದನ್ನೂ ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>ಕರ್ನಾಟಕದಲ್ಲಿ ಕನ್ನಡವನ್ನೇ ಮೆರೆಸಬೇಕು, ಉಳಿದ ಭಾಷೆಗಳನ್ನೂ ಕಲಿಯಲು ಅವಕಾಶ ಮಾಡಿಕೊಡಬೇಕು. ಕೆಲವರು ಇಂಗ್ಲಿಷ್ ಮೆರೆಸಿ ಕನ್ನಡ ಮರೆಸುತ್ತಿದ್ದಾರೆ. ಅದು ಸರಿಯಲ್ಲ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-51-2100022231</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>