<p><strong>ಚಿಕ್ಕಮಗಳೂರು:</strong> ‘ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಶನಿವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈ ಯೋಜನೆಯಡಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 40 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಈ ಅಂಗನವಾಡಿ ಕೇಂದ್ರಗಳಿಗೆ ಟಿವಿ, ಪೆನ್ಡ್ರೈವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಕ್ಕೆ ಬರುವ 3-6 ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.</p>.<p>ಪ್ರತಿ ವರ್ಷದಂತೆ ತಾಲ್ಲೂಕಿನ 407 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡಿದ ಅವರು, ಜತೆಗೆ ಇತರ ಪರಿಕರಗಳನ್ನು ನೀಡಲಾಗುವುದು. ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುವುದು ಎಂದರು.</p>.<p>ಅ.2ಕ್ಕೆ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಿ 50 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲ್ಲೂಕಿನ 47 ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದರು.</p>.<p>ಈ ಸಂಬಂಧ ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. 4-5 ವರ್ಷದ ಮಕ್ಕಳಿಗೆ ಎಲ್ಕೆಜಿ, 5-6 ವರ್ಷದ ಮಕ್ಕಳಿಗೆ ಯುಕೆಜಿ ತರಗತಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.</p>.<p>ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮೆಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು, ಅಂಗನವಾಡಿ ಫಲಾನುಭವಿಗಳಿಗೆ ಈ ಕಿಟ್ ಅನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಎಲ್ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು ಅಕ್ಟೋಬರ್ 2 ರಂದು ವಿದ್ಯುಕ್ತವಾಗಿ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್ಕುಮಾರ್, ಎಸಿಡಿಪಿಒ ರೂಪಾ ಕುಮಾರಿ, ವಸಂತ ಕುಮಾರಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.</p>.<p>ಶನಿವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಈ ಯೋಜನೆಯಡಿ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 40 ಅಂಗನವಾಡಿ ಕೇಂದ್ರಗಳನ್ನು ಗುರುತಿಸಿದ್ದು, ಈ ಅಂಗನವಾಡಿ ಕೇಂದ್ರಗಳಿಗೆ ಟಿವಿ, ಪೆನ್ಡ್ರೈವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಕ್ಕೆ ಬರುವ 3-6 ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.</p>.<p>ಪ್ರತಿ ವರ್ಷದಂತೆ ತಾಲ್ಲೂಕಿನ 407 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಮಾಡಿದ ಅವರು, ಜತೆಗೆ ಇತರ ಪರಿಕರಗಳನ್ನು ನೀಡಲಾಗುವುದು. ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಎರಡು ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುವುದು ಎಂದರು.</p>.<p>ಅ.2ಕ್ಕೆ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಿ 50 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲ್ಲೂಕಿನ 47 ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ ಎಂದರು.</p>.<p>ಈ ಸಂಬಂಧ ಈಗಾಗಲೇ ಪಠ್ಯಪುಸ್ತಕಗಳು ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿಗಳನ್ನು ನಡೆಸಲಾಗುವುದು. 4-5 ವರ್ಷದ ಮಕ್ಕಳಿಗೆ ಎಲ್ಕೆಜಿ, 5-6 ವರ್ಷದ ಮಕ್ಕಳಿಗೆ ಯುಕೆಜಿ ತರಗತಿಗಳನ್ನು ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.</p>.<p>ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮೆಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು, ಅಂಗನವಾಡಿ ಫಲಾನುಭವಿಗಳಿಗೆ ಈ ಕಿಟ್ ಅನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು.</p>.<p>ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಎಲ್ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು ಅಕ್ಟೋಬರ್ 2 ರಂದು ವಿದ್ಯುಕ್ತವಾಗಿ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್ಕುಮಾರ್, ಎಸಿಡಿಪಿಒ ರೂಪಾ ಕುಮಾರಿ, ವಸಂತ ಕುಮಾರಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>