<p>ಚಿಕ್ಕಮಗಳೂರು: ತಾಲ್ಲೂಕಿನ ಕೆಸವಿನಮನೆ ಗ್ರಾಮದ ಕೋಳಿ ಫಾರಂನಲ್ಲಿ ಅಕ್ರಮವಾಗಿ ಯೂರಿಯಾ ಸಂಗ್ರಹ ಮಾಡಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಗುರುಶಾಂತಪ್ಪ ಒತ್ತಾಯಿಸಿದರು.</p>.<p>ರೈತರಿಗೆ ಸಬ್ಸಿಡಿ ದರದಲ್ಲಿ ಕೊಡಬೇ ಕಾದ 400 ಯೂರಿಯಾ ಚೀಲಗಳನ್ನು ಕೃಷಿ ಇಲಾಖೆ ವಶಪಡಿಸಿಕೊಂಡು ಎಫ್ಐಆರ್ ದಾಖಲು ಮಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ರಸಗೊಬ್ಬರವನ್ನು ಅಷ್ಟೊಂದು ಪ್ರಮಾಣದಲ್ಲಿ ಸರಬರಾಜು ಮಾಡಿದ ಅಂಗಡಿ ಮಾಲೀಕರು ಯಾರು. ಈ ವ್ಯವಹಾರದಲ್ಲಿ ಯಾರು ಶಾಮಿಲಾಗಿದ್ದಾರೆ. ಐದಾರು ವರ್ಷಗಳಿಂದಲೂ ಈ ದಂಧೆ ನಡೆಯುತ್ತಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ ಎಂದರು.</p>.<p>₹280ರಿಂದ ₹300 ತನಕ ಸಿಗುವ ಯೂರಿಯಾ ಗೊಬ್ಬರವನ್ನು ಮರು ಪ್ಯಾಕ್ ಮಾಡಿ ಮಾರಾಟ ಮಾಡಿದರೆ ಸಾವಿ ರಾರು ರೂಪಾಯಿ ಲಾಭ ಸಿಗಲಿದೆ. ಈ ಆಸೆ ಯಿಂದ ಕಾಳಸಂತೆಕೋರರುಯೂರಿಯಾ ದಾಸ್ತಾನು ಮಾಡಿರಬಹುದು. ಈ ದಂಧೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.</p>.<p>ಕೋಳಿ ಫಾರಂ ಮಾಲೀಕ ರಾಜೇಶ್ ಮೇಲೆ ಮಾತ್ರ ಎಫ್ಐಆರ್ ದಾಖಲಾಗಿದೆ. ಅವರಿಗೆ ಸರಬರಾಜು ಮಾಡಿದ ರಸಗೊಬ್ಬರ ಮಾರಾಟಗಾರರ ಮೇಲೂ ಎಫ್ಐಆರ್ ದಾಖಲಾಗಬೇಕು ಎಂದು ಒತ್ತಾಯಿಸಿದರು.</p>.<p>5ರಿಂದ 10 ಟನ್ ಯೂರಿಯಾ ಏಪ್ರಿಲ್ ತಿಂಗಳಲ್ಲಿ ಮಾರಾಟ ಮಾಡಿರುವ ಸಂಘಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಆದರೆ, ಕಾಳಸಂತೆಯಲ್ಲಿ ಯೂರಿಯಾ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿದವರ ವಿರುದ್ಧ ಕ್ರಮ ಏನು ಎಂದು ಪ್ರಶ್ನಿಸಿದರು.</p>.<p>ಮುಗುಳವಳ್ಳಿ ಬಸವೇಶ್ವರ ಟ್ರೇಡರ್ಸ್ ರಸಗೊಬ್ಬರಗಳ ಮಾರಾಟಗಾರ ಒಂದೇ ತಿಂಗಳಲ್ಲಿ 256 ಟನ್ ಮಾರಾಟ ಮಾಡಿರುವುದಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಅಂಗಡಿ ಜಪ್ತಿ ಮಾಡಿದ್ದಾರೆ. ಇದೇ ರೀತಿ ಬೇರೆ ಕಡೆ ಎಷ್ಟೆಷ್ಟು ಪ್ರಮಾಣದ ರಸಗೊಬ್ಬರಗಳ ಮಾರಾಟ ಮಾಡಿದ್ದಾರೆ. ಕಾಳಸಂತೆಯಲ್ಲಿ ಎಷ್ಟು ರಸಗೊಬ್ಬರ ಮಾರಾಟವಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ವಕ್ತಾರ ಶಿವಣ್ಣ, ಆನಂದ್ ಕುಮಾರ್, ಬಸವರಾಜ್, ಮಧುಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-126-595935499</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ತಾಲ್ಲೂಕಿನ ಕೆಸವಿನಮನೆ ಗ್ರಾಮದ ಕೋಳಿ ಫಾರಂನಲ್ಲಿ ಅಕ್ರಮವಾಗಿ ಯೂರಿಯಾ ಸಂಗ್ರಹ ಮಾಡಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಗುರುಶಾಂತಪ್ಪ ಒತ್ತಾಯಿಸಿದರು.</p>.<p>ರೈತರಿಗೆ ಸಬ್ಸಿಡಿ ದರದಲ್ಲಿ ಕೊಡಬೇ ಕಾದ 400 ಯೂರಿಯಾ ಚೀಲಗಳನ್ನು ಕೃಷಿ ಇಲಾಖೆ ವಶಪಡಿಸಿಕೊಂಡು ಎಫ್ಐಆರ್ ದಾಖಲು ಮಾಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ರಸಗೊಬ್ಬರವನ್ನು ಅಷ್ಟೊಂದು ಪ್ರಮಾಣದಲ್ಲಿ ಸರಬರಾಜು ಮಾಡಿದ ಅಂಗಡಿ ಮಾಲೀಕರು ಯಾರು. ಈ ವ್ಯವಹಾರದಲ್ಲಿ ಯಾರು ಶಾಮಿಲಾಗಿದ್ದಾರೆ. ಐದಾರು ವರ್ಷಗಳಿಂದಲೂ ಈ ದಂಧೆ ನಡೆಯುತ್ತಿದೆ ಎಂದು ಗ್ರಾಮಸ್ಥರು ದೂರುತ್ತಿದ್ದಾರೆ ಎಂದರು.</p>.<p>₹280ರಿಂದ ₹300 ತನಕ ಸಿಗುವ ಯೂರಿಯಾ ಗೊಬ್ಬರವನ್ನು ಮರು ಪ್ಯಾಕ್ ಮಾಡಿ ಮಾರಾಟ ಮಾಡಿದರೆ ಸಾವಿ ರಾರು ರೂಪಾಯಿ ಲಾಭ ಸಿಗಲಿದೆ. ಈ ಆಸೆ ಯಿಂದ ಕಾಳಸಂತೆಕೋರರುಯೂರಿಯಾ ದಾಸ್ತಾನು ಮಾಡಿರಬಹುದು. ಈ ದಂಧೆಯ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.</p>.<p>ಕೋಳಿ ಫಾರಂ ಮಾಲೀಕ ರಾಜೇಶ್ ಮೇಲೆ ಮಾತ್ರ ಎಫ್ಐಆರ್ ದಾಖಲಾಗಿದೆ. ಅವರಿಗೆ ಸರಬರಾಜು ಮಾಡಿದ ರಸಗೊಬ್ಬರ ಮಾರಾಟಗಾರರ ಮೇಲೂ ಎಫ್ಐಆರ್ ದಾಖಲಾಗಬೇಕು ಎಂದು ಒತ್ತಾಯಿಸಿದರು.</p>.<p>5ರಿಂದ 10 ಟನ್ ಯೂರಿಯಾ ಏಪ್ರಿಲ್ ತಿಂಗಳಲ್ಲಿ ಮಾರಾಟ ಮಾಡಿರುವ ಸಂಘಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಆದರೆ, ಕಾಳಸಂತೆಯಲ್ಲಿ ಯೂರಿಯಾ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿದವರ ವಿರುದ್ಧ ಕ್ರಮ ಏನು ಎಂದು ಪ್ರಶ್ನಿಸಿದರು.</p>.<p>ಮುಗುಳವಳ್ಳಿ ಬಸವೇಶ್ವರ ಟ್ರೇಡರ್ಸ್ ರಸಗೊಬ್ಬರಗಳ ಮಾರಾಟಗಾರ ಒಂದೇ ತಿಂಗಳಲ್ಲಿ 256 ಟನ್ ಮಾರಾಟ ಮಾಡಿರುವುದಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಅಂಗಡಿ ಜಪ್ತಿ ಮಾಡಿದ್ದಾರೆ. ಇದೇ ರೀತಿ ಬೇರೆ ಕಡೆ ಎಷ್ಟೆಷ್ಟು ಪ್ರಮಾಣದ ರಸಗೊಬ್ಬರಗಳ ಮಾರಾಟ ಮಾಡಿದ್ದಾರೆ. ಕಾಳಸಂತೆಯಲ್ಲಿ ಎಷ್ಟು ರಸಗೊಬ್ಬರ ಮಾರಾಟವಾಗಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ವಕ್ತಾರ ಶಿವಣ್ಣ, ಆನಂದ್ ಕುಮಾರ್, ಬಸವರಾಜ್, ಮಧುಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-126-595935499</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>