<p><strong>ಕೊಪ್ಪ (ಚಿಕ್ಕಮಗಳೂರು):</strong> ಮಾನವ-ಪ್ರಾಣಿ ಸಂಘರ್ಷ ಕಡಿಮೆ ಮಾಡುವ ಭಾಗವಾಗಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಡುಕೋಣ ಸೆರೆ ಹಿಡಿದು ಸ್ಥಳಾಂತರ ಮಾಡಲು ಪ್ರಾಯೋಗಿಕ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಹೇಳಿದರು.</p>.<p>ಕಾರ್ಯಾಚರಣೆಯನ್ನು ಕೊಪ್ಪ ಎಸ್ಟೇಟ್ನಲ್ಲಿ ಗುರುವಾರ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾನ್ಯವಾಗಿ ಪುಂಡಾನೆ ಸೆರೆ ಹಿಡಿಯಲು ಸಾಕಾನೆಗಳನ್ನು ಬಳಸಲಾಗುತ್ತಿತ್ತು. ಇದೀಗ ಕಾಡುಕೋಣ ಸೆರೆಗೆ ಎರಡು ಆನೆಗಳನ್ನು ಬಳಸಲಾಗುತ್ತಿದೆ’ ಎಂದರು.</p>.<p>‘ಈ ತಂಡದಲ್ಲಿ ನನ್ನನ್ನು ಒಳಗೊಂಡಂತೆ ಹಿರಿಯ ಅಧಿಕಾರಿಗಳು, 6 ಮಂದಿ ತಜ್ಞ ವೈದ್ಯರು ಇದ್ದಾರೆ. ತುಂಬಾ ಎಚ್ಚರಿಕೆಯಿಂದ ಇದನ್ನು ನಿರ್ವಹಿಸಬೇಕಿದೆ’ ಎಂದರು.</p>.<p>ಶಾಸಕ ಟಿ.ಡಿ.ರಾಜೇಗೌಡ,ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಚಿಕ್ಕಮಗಳೂರು ಸಿಸಿಎಫ್ ಯಶ್ಪಾಲ್ ಕ್ಷೀರಸಾಗರ, ಕೊಪ್ಪ ಅರಣ್ಯ ವಿಭಾಗದ ಡಿಸಿಎಫ್ ಶಿವಶಂಕರ್, ಇಲಾಖೆ ಸಿಬ್ಬಂದಿ ಇದ್ದರು. ಮಳೆ ಕಾರಣಕ್ಕೆ ಕಾರ್ಯಾಚರಣೆ ಶುಕ್ರವಾರಕ್ಕೆ ಮುಂದೂಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-51-1096986360</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ (ಚಿಕ್ಕಮಗಳೂರು):</strong> ಮಾನವ-ಪ್ರಾಣಿ ಸಂಘರ್ಷ ಕಡಿಮೆ ಮಾಡುವ ಭಾಗವಾಗಿ ರಾಜ್ಯದಲ್ಲಿ ಮೊದಲ ಬಾರಿಗೆ ಕಾಡುಕೋಣ ಸೆರೆ ಹಿಡಿದು ಸ್ಥಳಾಂತರ ಮಾಡಲು ಪ್ರಾಯೋಗಿಕ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಕುಮಾರ್ ಪುಷ್ಕರ್ ಹೇಳಿದರು.</p>.<p>ಕಾರ್ಯಾಚರಣೆಯನ್ನು ಕೊಪ್ಪ ಎಸ್ಟೇಟ್ನಲ್ಲಿ ಗುರುವಾರ ಆರಂಭಿಸಲಾಯಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾನ್ಯವಾಗಿ ಪುಂಡಾನೆ ಸೆರೆ ಹಿಡಿಯಲು ಸಾಕಾನೆಗಳನ್ನು ಬಳಸಲಾಗುತ್ತಿತ್ತು. ಇದೀಗ ಕಾಡುಕೋಣ ಸೆರೆಗೆ ಎರಡು ಆನೆಗಳನ್ನು ಬಳಸಲಾಗುತ್ತಿದೆ’ ಎಂದರು.</p>.<p>‘ಈ ತಂಡದಲ್ಲಿ ನನ್ನನ್ನು ಒಳಗೊಂಡಂತೆ ಹಿರಿಯ ಅಧಿಕಾರಿಗಳು, 6 ಮಂದಿ ತಜ್ಞ ವೈದ್ಯರು ಇದ್ದಾರೆ. ತುಂಬಾ ಎಚ್ಚರಿಕೆಯಿಂದ ಇದನ್ನು ನಿರ್ವಹಿಸಬೇಕಿದೆ’ ಎಂದರು.</p>.<p>ಶಾಸಕ ಟಿ.ಡಿ.ರಾಜೇಗೌಡ,ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಚಿಕ್ಕಮಗಳೂರು ಸಿಸಿಎಫ್ ಯಶ್ಪಾಲ್ ಕ್ಷೀರಸಾಗರ, ಕೊಪ್ಪ ಅರಣ್ಯ ವಿಭಾಗದ ಡಿಸಿಎಫ್ ಶಿವಶಂಕರ್, ಇಲಾಖೆ ಸಿಬ್ಬಂದಿ ಇದ್ದರು. ಮಳೆ ಕಾರಣಕ್ಕೆ ಕಾರ್ಯಾಚರಣೆ ಶುಕ್ರವಾರಕ್ಕೆ ಮುಂದೂಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-51-1096986360</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>