<p><strong>ಚಿಕ್ಕಮಗಳೂರು</strong>: ಮುಳ್ಳಯನಗಿರಿಯ ಹುಲ್ಲುಗಾವಲಿನಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.</p>.<p>ಸೋಮವಾರ ಮಧ್ಯಾಹ್ನದಿಂದಲೇ ಬೆಂಕಿ ಹೊಗೆಯಾಡುತ್ತಿದ್ದು, ಸಂಜೆ ವೇಳೆಗೆ ಜಾಸ್ತಿಯಾಗಿದೆ. ಕವಿಕಲ್ ಗಂಡಿ ಬಳಿ ಮೊದಲಿಗೆ ಕಾಣಿಸಿಕೊಂಡ ಬೆಂಕಿ, ಅಲ್ಲಿಂದ ಇಳಿಜಾರು ಪ್ರದೇಶಕ್ಕೆ ಆವರಿಸಿಕೊಂಡಿದೆ. ಒಣಗಿರುವ ಹುಲ್ಲುಗಾವಲಿನಲ್ಲಿ ಬೆಂಕಿ ಜೋರಾಗಿ ಹೊತ್ತಿಕೊಂಡಿದೆ. ಗಾಳಿ ಕೂಡ ವೇಗವಾಗಿ ಬೀಸುತ್ತಿರುವುದರಿಂದ ಕಾಳ್ಗಿಚ್ಚು ಜೋರಾಗಿದೆ. </p>.<p>ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲದ ಗಿರಿ ಪ್ರದೇಶ ಆಗಿರುವುದರಿಂದ ಬೆಂಕಿ ನಂದಿಸುವುದು ಕಷ್ಟವಾಗಿದೆ. ಮತ್ತೊಂದೆಡೆ ಸೀತಾಳಯ್ಯನಗಿರಿ ಬಳಿ ಕಾಣಿಸಿಕೊಂಡು ಬೆಂಕಿ ಕೊಂಚ ಹತೋಟಿಗೆ ಬಂದಿದೆ.</p>.<p>ಸಂರಕ್ಷಿತ ಅರಣ್ಯವಾಗಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ನಂದಿಸುವ ಕಾರ್ಯವನ್ನು ಅರಣ್ಯ ಸಿಬ್ಬಂದಿ ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು. </p>.<p>ಶೋಲಾ ಅರಣ್ಯ ಮತ್ತು ವನ್ಯಜೀವಿಗಳ ತಾಣವಾಗಿರುವ ಪ್ರದೇಶಕ್ಕೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಪರಿಸರ ಪ್ರಿಯರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಮುಳ್ಳಯನಗಿರಿಯ ಹುಲ್ಲುಗಾವಲಿನಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.</p>.<p>ಸೋಮವಾರ ಮಧ್ಯಾಹ್ನದಿಂದಲೇ ಬೆಂಕಿ ಹೊಗೆಯಾಡುತ್ತಿದ್ದು, ಸಂಜೆ ವೇಳೆಗೆ ಜಾಸ್ತಿಯಾಗಿದೆ. ಕವಿಕಲ್ ಗಂಡಿ ಬಳಿ ಮೊದಲಿಗೆ ಕಾಣಿಸಿಕೊಂಡ ಬೆಂಕಿ, ಅಲ್ಲಿಂದ ಇಳಿಜಾರು ಪ್ರದೇಶಕ್ಕೆ ಆವರಿಸಿಕೊಂಡಿದೆ. ಒಣಗಿರುವ ಹುಲ್ಲುಗಾವಲಿನಲ್ಲಿ ಬೆಂಕಿ ಜೋರಾಗಿ ಹೊತ್ತಿಕೊಂಡಿದೆ. ಗಾಳಿ ಕೂಡ ವೇಗವಾಗಿ ಬೀಸುತ್ತಿರುವುದರಿಂದ ಕಾಳ್ಗಿಚ್ಚು ಜೋರಾಗಿದೆ. </p>.<p>ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಹೋಗಲು ಸಾಧ್ಯವಿಲ್ಲದ ಗಿರಿ ಪ್ರದೇಶ ಆಗಿರುವುದರಿಂದ ಬೆಂಕಿ ನಂದಿಸುವುದು ಕಷ್ಟವಾಗಿದೆ. ಮತ್ತೊಂದೆಡೆ ಸೀತಾಳಯ್ಯನಗಿರಿ ಬಳಿ ಕಾಣಿಸಿಕೊಂಡು ಬೆಂಕಿ ಕೊಂಚ ಹತೋಟಿಗೆ ಬಂದಿದೆ.</p>.<p>ಸಂರಕ್ಷಿತ ಅರಣ್ಯವಾಗಿದ್ದು, ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ನಂದಿಸುವ ಕಾರ್ಯವನ್ನು ಅರಣ್ಯ ಸಿಬ್ಬಂದಿ ನಿರಂತರವಾಗಿ ಮಾಡುತ್ತಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು. </p>.<p>ಶೋಲಾ ಅರಣ್ಯ ಮತ್ತು ವನ್ಯಜೀವಿಗಳ ತಾಣವಾಗಿರುವ ಪ್ರದೇಶಕ್ಕೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಪರಿಸರ ಪ್ರಿಯರ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>