<p>ಚಿಕ್ಕಮಗಳೂರು: ನಗರದ ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ವಿಚಾರ ಈಗ ಪ್ರಧಾನಿ ಕಚೇರಿ ತಲುಪಿದೆ. ತನಿಖೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಪ್ರಧಾನ ಮಂತ್ರಿ ಕಚೇರಿ ಆದೇಶಿಸಿದೆ.</p>.<p>ಹಳ್ಳದ ರಾಮೇಶ್ವರ ದೇವಾಲಯ ಸೇವಾ ಸಂಘದ ಅಧ್ಯಕ್ಷರೂ ಆಗಿರುವ ಪತ್ರಕರ್ತ ದಿನೇಶ್ ಪಟವರ್ಧನ್ ಬರೆದಿದ್ದ ಪತ್ರಕ್ಕೆ ಪ್ರಧಾನಮಂತ್ರಿ ಕಚೇರಿ ಸ್ಪಂದಿಸಿದೆ.</p>.<p>‘ನಗರದ ರಾಮೇಶ್ವರ ನಗರ ಬಡಾವಣೆಯ ಹಳ್ಳದ ರಾಮೇಶ್ವರ ದೇವಸ್ಥಾನವು ಅತ್ಯಂತ ಪುರಾತನ ಮತ್ತು ಮಹತ್ವದ ದೇವಾಲಯವಾಗಿದೆ. ಆರು ವರ್ಷಗಳ ಹಿಂದೆ ಈ ದೇಗುಲ ನವೀಕರಣಗೊಂಡಿದೆ. ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಉದ್ಭವ ಲಿಂಗ, ಪಾರ್ವತಿ, ಗಣಪತಿ ಹಾಗೂ ಈಶ್ವರನ ಮೂರ್ತಿಗಳು ಇಲ್ಲಿ ಪ್ರಮುಖ ಆಕರ್ಷಣೆಯಾಗಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ದೇವಸ್ಥಾನದ ಮುಂಭಾಗದಲ್ಲಿ ಯಗಚಿ ಹಳ್ಳದಲ್ಲಿ ಕೊಳಚೆ ನೀರು ನಿರಂತರವಾಗಿ ಹರಿಯುತ್ತಿದೆ. ಇದರಿಂದ ಪರಿಸರ ಮಾಲಿನ್ಯದ ಜೊತೆಗೆ ಬೇಸಿಗೆಯಲ್ಲಿ ಕೆಟ್ಟ ವಾಸನೆ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು ಮತ್ತು ಭಕ್ತರಿಗೆ ತೀವ್ರ ತೊಂದರೆಯಾಗಿದೆ. ದುರ್ವಾಸನೆ ಹಾಗೂ ಆರೋಗ್ಯದ ಅಪಾಯ ಉಂಟಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದರು.</p>.<p>ಪತ್ರಕ್ಕೆ ಸ್ಪಂದಿಸಿರುವ ಪ್ರಧಾನ ಮಂತ್ರಿ ಕಚೇರಿ, ‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ (ಕೆಎಸ್ಪಿಸಿಬಿ) ಆದೇಶ ನೀಡಿದ್ದು, ಕೊಳಚೆ ನೀರನ್ನು ನೇರವಾಗಿ ಹರಿಬಿಡುತ್ತಿರುವ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಸೂಚಿಸಿದೆ’.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-126-2005900894</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನಗರದ ಯಗಚಿ ಹಳ್ಳಕ್ಕೆ ಕೊಳಚೆ ನೀರು ಸೇರುತ್ತಿರುವ ವಿಚಾರ ಈಗ ಪ್ರಧಾನಿ ಕಚೇರಿ ತಲುಪಿದೆ. ತನಿಖೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಪ್ರಧಾನ ಮಂತ್ರಿ ಕಚೇರಿ ಆದೇಶಿಸಿದೆ.</p>.<p>ಹಳ್ಳದ ರಾಮೇಶ್ವರ ದೇವಾಲಯ ಸೇವಾ ಸಂಘದ ಅಧ್ಯಕ್ಷರೂ ಆಗಿರುವ ಪತ್ರಕರ್ತ ದಿನೇಶ್ ಪಟವರ್ಧನ್ ಬರೆದಿದ್ದ ಪತ್ರಕ್ಕೆ ಪ್ರಧಾನಮಂತ್ರಿ ಕಚೇರಿ ಸ್ಪಂದಿಸಿದೆ.</p>.<p>‘ನಗರದ ರಾಮೇಶ್ವರ ನಗರ ಬಡಾವಣೆಯ ಹಳ್ಳದ ರಾಮೇಶ್ವರ ದೇವಸ್ಥಾನವು ಅತ್ಯಂತ ಪುರಾತನ ಮತ್ತು ಮಹತ್ವದ ದೇವಾಲಯವಾಗಿದೆ. ಆರು ವರ್ಷಗಳ ಹಿಂದೆ ಈ ದೇಗುಲ ನವೀಕರಣಗೊಂಡಿದೆ. ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಉದ್ಭವ ಲಿಂಗ, ಪಾರ್ವತಿ, ಗಣಪತಿ ಹಾಗೂ ಈಶ್ವರನ ಮೂರ್ತಿಗಳು ಇಲ್ಲಿ ಪ್ರಮುಖ ಆಕರ್ಷಣೆಯಾಗಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.</p>.<p>ದೇವಸ್ಥಾನದ ಮುಂಭಾಗದಲ್ಲಿ ಯಗಚಿ ಹಳ್ಳದಲ್ಲಿ ಕೊಳಚೆ ನೀರು ನಿರಂತರವಾಗಿ ಹರಿಯುತ್ತಿದೆ. ಇದರಿಂದ ಪರಿಸರ ಮಾಲಿನ್ಯದ ಜೊತೆಗೆ ಬೇಸಿಗೆಯಲ್ಲಿ ಕೆಟ್ಟ ವಾಸನೆ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರು ಮತ್ತು ಭಕ್ತರಿಗೆ ತೀವ್ರ ತೊಂದರೆಯಾಗಿದೆ. ದುರ್ವಾಸನೆ ಹಾಗೂ ಆರೋಗ್ಯದ ಅಪಾಯ ಉಂಟಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದರು.</p>.<p>ಪತ್ರಕ್ಕೆ ಸ್ಪಂದಿಸಿರುವ ಪ್ರಧಾನ ಮಂತ್ರಿ ಕಚೇರಿ, ‘ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ (ಕೆಎಸ್ಪಿಸಿಬಿ) ಆದೇಶ ನೀಡಿದ್ದು, ಕೊಳಚೆ ನೀರನ್ನು ನೇರವಾಗಿ ಹರಿಬಿಡುತ್ತಿರುವ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಸೂಚಿಸಿದೆ’.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-126-2005900894</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>