ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಮತ್ತಾವರದಲ್ಲಿ ಯುವಕನ ಹತ್ಯೆ

Last Updated 3 ನವೆಂಬರ್ 2021, 8:35 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಮತ್ತಾವರ ಗ್ರಾಮದ ಎಂ.ಎಸ್‌. ಪ್ರಕೃತ್‌ (30) ಎಂಬವರ ಹತ್ಯೆ ಬುಧವಾರ ನಡೆದಿದೆ. ತೋಟದ ಹಾದಿಯಲ್ಲಿ ರಕ್ತಸಿಕ್ತ ಮೃತದೇಹ ಪತ್ತೆಯಾಗಿದೆ.

ಪ್ರಕೃತ್‌ ಅವರು ಬೆಳಿಗ್ಗೆ ಕಾಫಿ ತೋಟಕ್ಕೆ ಹೋಗಿದ್ದಾಗ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಜಮೀನು ವಿಚಾರದ ವೈಷಮ್ಯದಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಶ್ವಾನ ದಳ ಸ್ಥಳ ಪರಿಶೀಲನೆ ನಡೆಸಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT