<p><strong>ಚಿಕ್ಕಮಗಳೂರು:</strong> ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ ಮೈಗೂಡಿಸಬೇಕು ಎಂದು ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ ಸಲಹೆ ನೀಡಿದರು.</p>.<p>ನಗರದ ಕುವೆಂಪು ಕಲಾ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಹಳೇಉಪ್ಪಳ್ಳಿಯ ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶೈಕ್ಷಣಿಕ, ಸಾಮಾಜಿಕ ಮತ್ತು ವೈಜ್ಞಾನಿಕವಾಗಿ ದೇಶ ಇಂದು ಬಹಳಷ್ಟು ಮುಂದುವರಿದಿದೆ. ಆದರೆ, ಎಲ್ಲೆಡೆ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಅದರಿಂದ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯ ಮರೆಯಾಗುತ್ತಿದೆ ಎಂದು ವಿಷಾದಿಸಿದರು.</p>.<p>ವಿದ್ಯಾರ್ಥಿಗಳು ಯೋಗ, ಧ್ಯಾನ ಅಭ್ಯಸಿಸಬೇಕು. ಸಂಗೀತ, ಕ್ರೀಡೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಆತ್ಮಬಲ ಹೆಚ್ಚಿಸಿಕೊಳ್ಳಬೇಕು ಎಂದರು.</p>.<p>ಪ್ರಾಚಾರ್ಯೆ ಎಚ್.ಪಾಲಾಕ್ಷಮ್ಮ ಮಾತನಾಡಿ, ವಿದ್ಯಾರ್ಥಿಗಳನ್ನು ಶಿಕ್ಷಣವಂತರನ್ನಾಗಿಸುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸುವ ಕೆಲಸವನ್ನೂ ಶಾಲೆ ಮಾಡುತ್ತಿದೆ ಎಂದರು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಶಿಕ್ಷಕಿಯರಾದ ಆಜ್ರಾ ಮತ್ತು ಸಂಗೀತ, ಗೀತಾ ಕಾರ್ಯಕ್ರಮ ನಿರೂಪಿಸಿದರು.</p>.<p>ಮುಖಂಡ ಯು.ಎಚ್.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಖಾಸಗಿ ಶಾಲೆಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಉಮಾಶಂಕರ್, ರೇಣುಕಾಚಾರ್ಯ ಟ್ರಸ್ಟ್ನ ಖಜಾಂಚಿ ಯು.ಎಂ.ಬಸವ ರಾಜ್, ಬಿ.ಎಂ.ನೀಲ ಕಂಠಪ್ಪ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಘ್ನೇಶ್, ರಾಜಯೋಗಿನಿ ಬಿ.ಕೆ.ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ ಮೈಗೂಡಿಸಬೇಕು ಎಂದು ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯಕ್ಕ ಸಲಹೆ ನೀಡಿದರು.</p>.<p>ನಗರದ ಕುವೆಂಪು ಕಲಾ ಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಹಳೇಉಪ್ಪಳ್ಳಿಯ ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶೈಕ್ಷಣಿಕ, ಸಾಮಾಜಿಕ ಮತ್ತು ವೈಜ್ಞಾನಿಕವಾಗಿ ದೇಶ ಇಂದು ಬಹಳಷ್ಟು ಮುಂದುವರಿದಿದೆ. ಆದರೆ, ಎಲ್ಲೆಡೆ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಅದರಿಂದ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯ ಮರೆಯಾಗುತ್ತಿದೆ ಎಂದು ವಿಷಾದಿಸಿದರು.</p>.<p>ವಿದ್ಯಾರ್ಥಿಗಳು ಯೋಗ, ಧ್ಯಾನ ಅಭ್ಯಸಿಸಬೇಕು. ಸಂಗೀತ, ಕ್ರೀಡೆ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಆತ್ಮಬಲ ಹೆಚ್ಚಿಸಿಕೊಳ್ಳಬೇಕು ಎಂದರು.</p>.<p>ಪ್ರಾಚಾರ್ಯೆ ಎಚ್.ಪಾಲಾಕ್ಷಮ್ಮ ಮಾತನಾಡಿ, ವಿದ್ಯಾರ್ಥಿಗಳನ್ನು ಶಿಕ್ಷಣವಂತರನ್ನಾಗಿಸುವುದರ ಜೊತೆಗೆ ಅವರಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸುವ ಕೆಲಸವನ್ನೂ ಶಾಲೆ ಮಾಡುತ್ತಿದೆ ಎಂದರು.</p>.<p>ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಶಿಕ್ಷಕಿಯರಾದ ಆಜ್ರಾ ಮತ್ತು ಸಂಗೀತ, ಗೀತಾ ಕಾರ್ಯಕ್ರಮ ನಿರೂಪಿಸಿದರು.</p>.<p>ಮುಖಂಡ ಯು.ಎಚ್.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಖಾಸಗಿ ಶಾಲೆಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಉಮಾಶಂಕರ್, ರೇಣುಕಾಚಾರ್ಯ ಟ್ರಸ್ಟ್ನ ಖಜಾಂಚಿ ಯು.ಎಂ.ಬಸವ ರಾಜ್, ಬಿ.ಎಂ.ನೀಲ ಕಂಠಪ್ಪ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ವಿಘ್ನೇಶ್, ರಾಜಯೋಗಿನಿ ಬಿ.ಕೆ.ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>