<p><strong>ಚಿಕ್ಕಮಗಳೂರು:</strong> ಹತ್ತು ದಿನಗಳ ಹಿಂದೆ ಸುರಿದ ಮಳೆಯಿಂದ ಕಾಫಿ ಹೂವುಗಳು ಅರಳಿದ್ದು, ಇದು ಬೆಳೆಗಾರರ ಬದುಕನ್ನು ಮಂಕಾಗಿಸಿದೆ.</p>.<p>ಕಾಫಿ ಹಣ್ಣು ಕೊಯ್ಲಿನ ಸಂದರ್ಭದಲ್ಲಿ ಹೂವು ಅರಳಿರುವುದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಈಗ ಹೂವು ಅರಳಿದರೆ ಮುಂದಿನ ವರ್ಷದ ಫಸಲಿನ ಮೇಲೆ ಪರಿಣಾಮ ಬೀರಲಿದೆ. ಶೇ 50ರಷ್ಟು ಇಳುವರಿ ಕಡಿಮೆಯಾಗಲಿದೆ ಎಂಬುದು ರೈತರ ಆತಂಕವಾಗಿದೆ. </p>.<p>ಯುಗಾದಿ ನಂತರ ಬರುವ ರೋಹಿಣಿ ಮಳೆಯನ್ನು ಹೂವಿನ ಮಳೆ ಎಂದು ಕಾಫಿ ಬೆಳೆಗಾರರು ಕರೆಯುತ್ತಾರೆ. ಆದರೆ, ಈ ವರ್ಷ ಜನವರಿಯಲ್ಲಿ ಸುರಿದ ಮಳೆಯಿಂದಾಗಿ ಯಾವುದೇ ಕಾಫಿ ತೋಟಕ್ಕೆ ಹೋದರೂ ಹೂವಿನ ಪರಿಮಳ ಹರಡಿದೆ. ಇನ್ನು ನೀರು ಸಿಗದಿದ್ದರೆ ಈಗ ಅರಳಿರುವ ಹೂವು ಉದುರಿ ಹೋಗಲಿದ್ದು, ಮುಂದಿನ ವರ್ಷದ ಫಸಲು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂದು ರೈತರು ಅಂದಾಜಿಸಿದ್ದಾರೆ.</p>.<p>‘ಈ ಮಳೆ ಎರಡು ವರ್ಷಗಳ ಫಸಲನ್ನು ಆಹುತಿ ಪಡೆದಿದೆ. ಹಣ್ಣಿನ ಮೇಲೆ ಮಳೆಯಾಗಿದ್ದರಿಂದ ಕಾಫಿ ಹಣ್ಣು ಗಿಡದಲ್ಲಿಯೇ ಒಣಗುತ್ತಿದ್ದು, ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಹೂವಾಗದ ಕಾರಣ ಮುಂದಿನ ಫಸಲಿಗೂ ನಷ್ಟವಾಗಿದೆ’ ಎಂದು ಬೆಳೆಗಾರರು ಹೇಳುತ್ತಾರೆ.</p>.<p>ಈ ಅಕಾಲಿಕ ಮಳೆ ಅರೇಬಿಕಾ ಕಾಫಿಗಿಂತ ರೋಬಾಸ್ಟ ಕಾಫಿಗೆ ಹೆಚ್ಚು ಹಾನಿ ಮಾಡಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಹತ್ತು ದಿನಗಳ ಹಿಂದೆ ಸುರಿದ ಮಳೆಯಿಂದ ಕಾಫಿ ಹೂವುಗಳು ಅರಳಿದ್ದು, ಇದು ಬೆಳೆಗಾರರ ಬದುಕನ್ನು ಮಂಕಾಗಿಸಿದೆ.</p>.<p>ಕಾಫಿ ಹಣ್ಣು ಕೊಯ್ಲಿನ ಸಂದರ್ಭದಲ್ಲಿ ಹೂವು ಅರಳಿರುವುದು ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಈಗ ಹೂವು ಅರಳಿದರೆ ಮುಂದಿನ ವರ್ಷದ ಫಸಲಿನ ಮೇಲೆ ಪರಿಣಾಮ ಬೀರಲಿದೆ. ಶೇ 50ರಷ್ಟು ಇಳುವರಿ ಕಡಿಮೆಯಾಗಲಿದೆ ಎಂಬುದು ರೈತರ ಆತಂಕವಾಗಿದೆ. </p>.<p>ಯುಗಾದಿ ನಂತರ ಬರುವ ರೋಹಿಣಿ ಮಳೆಯನ್ನು ಹೂವಿನ ಮಳೆ ಎಂದು ಕಾಫಿ ಬೆಳೆಗಾರರು ಕರೆಯುತ್ತಾರೆ. ಆದರೆ, ಈ ವರ್ಷ ಜನವರಿಯಲ್ಲಿ ಸುರಿದ ಮಳೆಯಿಂದಾಗಿ ಯಾವುದೇ ಕಾಫಿ ತೋಟಕ್ಕೆ ಹೋದರೂ ಹೂವಿನ ಪರಿಮಳ ಹರಡಿದೆ. ಇನ್ನು ನೀರು ಸಿಗದಿದ್ದರೆ ಈಗ ಅರಳಿರುವ ಹೂವು ಉದುರಿ ಹೋಗಲಿದ್ದು, ಮುಂದಿನ ವರ್ಷದ ಫಸಲು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಲಿದೆ ಎಂದು ರೈತರು ಅಂದಾಜಿಸಿದ್ದಾರೆ.</p>.<p>‘ಈ ಮಳೆ ಎರಡು ವರ್ಷಗಳ ಫಸಲನ್ನು ಆಹುತಿ ಪಡೆದಿದೆ. ಹಣ್ಣಿನ ಮೇಲೆ ಮಳೆಯಾಗಿದ್ದರಿಂದ ಕಾಫಿ ಹಣ್ಣು ಗಿಡದಲ್ಲಿಯೇ ಒಣಗುತ್ತಿದ್ದು, ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ. ಮಳೆಯಿಂದ ಪೂರ್ಣ ಪ್ರಮಾಣದಲ್ಲಿ ಹೂವಾಗದ ಕಾರಣ ಮುಂದಿನ ಫಸಲಿಗೂ ನಷ್ಟವಾಗಿದೆ’ ಎಂದು ಬೆಳೆಗಾರರು ಹೇಳುತ್ತಾರೆ.</p>.<p>ಈ ಅಕಾಲಿಕ ಮಳೆ ಅರೇಬಿಕಾ ಕಾಫಿಗಿಂತ ರೋಬಾಸ್ಟ ಕಾಫಿಗೆ ಹೆಚ್ಚು ಹಾನಿ ಮಾಡಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>