ಜಿಲ್ಲಾ ಕಾನೂನು ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸಿವಿಲ್ ನ್ಯಾಯಾಧೀಶ ಎ.ಎಸ್ ಸೋಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಬಲು ಮುಖ್ಯ. ಅದರ ತಿಳಿವಳಿಕೆ ಇಲ್ಲದೆ ಅಪರಾಧ ಕೃತ್ಯಗಳಲ್ಲಿ ಕಾನೂನುಬಾಹಿರವಾಗಿ ಭಾಗಿಯಾದರೆ ಕ್ಷಮೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಬಾಲ್ಯ ವಿವಾಹ ನಿಷೇಧ ಕಾನೂನು, ಪೋಕ್ಸೊ ಕಾಯ್ದೆ, ಮಾದಕ ವಸ್ತು ಸೇವನೆ ಮತ್ತು ಮಾರಾಟ ನಿಯಂತ್ರಣ ಕುರಿತು ವಿವರವಾಗಿ ತಿಳಿದುಕೊಳ್ಳುವುದು ಅವಶ್ಯಕ’ ಎಂದರು.