ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಭದ್ರಾ ನದಿ ತುಂಬಿ ಹರಿಯುತ್ತಿದೆ. ಬಾಳೆಹೊನ್ನೂರು– ಕಳಸ ರಸ್ತೆಯ ಮಹಾಲಗೋಡು ಎಂಬಲ್ಲಿ ಮೋರಿಯ ಮೇಲೆ ನೀರು ಹರಿದ ಪರಿಣಾಮ ಬೆಳಿಗ್ಗೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಕೊಪ್ಪ ತಾಲ್ಲೂಕಿನ ಬಿಳಾಲುಕೊಪ್ಪ-ನಂದಿಕುಣಿ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಮಣ್ಣು ಕುಸಿದಿದ್ದು ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಶನಿವಾರ ಬೆಳಿಗ್ಗೆ ಹಾಗೂ ಮಧ್ಯಾಹ್ನದ ನಂತರ ಮಳೆಯ ಪ್ರಮಾಣ ಹೆಚ್ಚಾಗಿತ್ತು.