<p><strong>ಚಿಕ್ಕಮಗಳೂರು</strong>: ನಗರದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಡ್ ರೋಗಿ ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯ ಮೇಘರಾಜ್ (31) ಅವರನ್ನು ಜನರಲ್ ವಾರ್ಡ್ನಿಂದ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ, ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<p>ಮೇಘರಾಜ್ ಸಂಬಂಧಿ ಸುಧೀರ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಮೂರು ದಿನಗಳ ಹಿಂದೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದೆವು. ಅವತ್ತಿನಿಂದಲೂ ಜನರಲ್ ವಾರ್ಡ್ನಲ್ಲೇ ಇಟ್ಟಿದ್ದಾರೆ. ಬುಧವಾರ ರಾತ್ರಿ (ಇದೇ 13) ಮೇಘರಾಜ್ ಫೋನ್ನಲ್ಲಿ ಮಾತನಾಡಿದ್ದರು.</p>.<p>ಐಸಿಯು ವರ್ಗಾಯಿಸುತ್ತಾರೆ ಎಂದು ಹೇಳಿದ್ದರು. ಆದರೆ, ಆಸ್ಪತ್ರೆಯವರು ವರ್ಗಾಯಿಸಿಲ್ಲ. ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಿದ್ದರೆ ಬದುಕುತ್ತಿದ್ದರೇನೋ?’ ಎಂದು ಕಣ್ಣೀರಿಟ್ಟರು.</p>.<p>‘ಮೇಘರಾಜ್ಗೆ ಫೋನ್ ಮಾಡಿದಾಗ ಆಸ್ಪತ್ರೆ ಸಿಬ್ಬಂದಿ ಕರೆ ಸ್ವೀಕರಿಸಿ, ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿಯನ್ನು ನೀಡಿರಲಿಲ್ಲ.</p>.<p>₹2.5 ಲಕ್ಷ ಬಿಲ್ ಕಟ್ಟಿಸಿಕೊಂಡಿದ್ದಾರೆ. ಆಸ್ಪತ್ರೆಯವರು ಸರಿಯಾಗಿ ಮಾಹಿತಿ ನೀಡದೆ ಮೋಸ ಮಾಡಿದ್ದಾರೆ’ ಎಂದು ದೂರಿದರು.</p>.<p><a href="https://www.prajavani.net/karnataka-news/should-we-hang-ourself-for-no-production-of-vaccine-says-d-v-sadananda-gowda-830231.html" itemprop="url">ಲಸಿಕೆ ಉತ್ಪಾದನೆ ಆಗದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?: ಡಿವಿಎಸ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ನಗರದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಡ್ ರೋಗಿ ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯ ಮೇಘರಾಜ್ (31) ಅವರನ್ನು ಜನರಲ್ ವಾರ್ಡ್ನಿಂದ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ, ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<p>ಮೇಘರಾಜ್ ಸಂಬಂಧಿ ಸುಧೀರ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಮೂರು ದಿನಗಳ ಹಿಂದೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದೆವು. ಅವತ್ತಿನಿಂದಲೂ ಜನರಲ್ ವಾರ್ಡ್ನಲ್ಲೇ ಇಟ್ಟಿದ್ದಾರೆ. ಬುಧವಾರ ರಾತ್ರಿ (ಇದೇ 13) ಮೇಘರಾಜ್ ಫೋನ್ನಲ್ಲಿ ಮಾತನಾಡಿದ್ದರು.</p>.<p>ಐಸಿಯು ವರ್ಗಾಯಿಸುತ್ತಾರೆ ಎಂದು ಹೇಳಿದ್ದರು. ಆದರೆ, ಆಸ್ಪತ್ರೆಯವರು ವರ್ಗಾಯಿಸಿಲ್ಲ. ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಿದ್ದರೆ ಬದುಕುತ್ತಿದ್ದರೇನೋ?’ ಎಂದು ಕಣ್ಣೀರಿಟ್ಟರು.</p>.<p>‘ಮೇಘರಾಜ್ಗೆ ಫೋನ್ ಮಾಡಿದಾಗ ಆಸ್ಪತ್ರೆ ಸಿಬ್ಬಂದಿ ಕರೆ ಸ್ವೀಕರಿಸಿ, ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ರೋಗಿಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿಯನ್ನು ನೀಡಿರಲಿಲ್ಲ.</p>.<p>₹2.5 ಲಕ್ಷ ಬಿಲ್ ಕಟ್ಟಿಸಿಕೊಂಡಿದ್ದಾರೆ. ಆಸ್ಪತ್ರೆಯವರು ಸರಿಯಾಗಿ ಮಾಹಿತಿ ನೀಡದೆ ಮೋಸ ಮಾಡಿದ್ದಾರೆ’ ಎಂದು ದೂರಿದರು.</p>.<p><a href="https://www.prajavani.net/karnataka-news/should-we-hang-ourself-for-no-production-of-vaccine-says-d-v-sadananda-gowda-830231.html" itemprop="url">ಲಸಿಕೆ ಉತ್ಪಾದನೆ ಆಗದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?: ಡಿವಿಎಸ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>