ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಡಳಿತದ ಲೋಪ ದೋಷ ತಿದ್ದುವಲ್ಲಿ ಪತ್ರಿಕೆಗಳ ಪಾತ್ರ ಹಿರಿದು: ಸುರೇಶ್‌

Last Updated 26 ಜುಲೈ 2022, 6:27 IST
ಅಕ್ಷರ ಗಾತ್ರ

ತರೀಕೆರೆ: ಆಡಳಿತ ವರ್ಗದ ಲೋಪದೋಷಗಳನ್ನು ಎತ್ತಿಹಿಡಿದು ಅವುಗಳನ್ನು ಸರಿಪಡಿಸುವಲ್ಲಿ ಪತ್ರಿಕೆಯ ಪಾತ್ರ ಮಹತ್ವದಾಗಿದೆ ಎಂದು ಶಾಸಕ ಡಿ.ಎಸ್.ಸುರೇಶ್ ಹೇಳಿದರು.

ಪಟ್ಟಣದ ಹೋಟೆಲ್‌ನಲ್ಲಿ ಸೋಮವಾರ ತಾಲ್ಲೂಕು ಪತ್ರಕರ್ತರ ಸಂಘ ಹಾಗೂ ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಡೂರು ಮಾಜಿ ಶಾಸಕ ವೈ.ಎಸ್.ವಿ. ದತ್ತ ಮಾತನಾಡಿ, ‘ಖಾದ್ರಿ ಶಾಮಣ್ಣ ಕಾಲದಲ್ಲಿ ಪತ್ರಿಕೆಗಳ ಸಂಪಾದಕೀಯ ಸರ್ಕಾರದ ಅಳಿವು ಮತ್ತು ಉಳಿವು ಪ್ರತಿಬಿಂಬಿಸುತ್ತಿದ್ದವು. ಇಂದು ಪತ್ರಿಕೆಗಳು ಮಾಲೀಕರ ಅಭಿಪ್ರಾಯ ಬಿಂಬಿ
ಸುತ್ತಿರುವುದಕ್ಕೆ ಸೀಮಿತವಾಗುತ್ತಿದೆ ಎಂದು ವಿಷಾದಿಸಿದರು.

ಮಾಜಿ ಶಾಸಕ ಜಿ.ಎಚ್. ಶ್ರೀನಿವಾಸ್ ಮಾತನಾಡಿ, ಮಾಧ್ಯಮಗಳು ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದರು.

ಸಮಾಜ ಸೇವಕ ಎಚ್.ಎಂ ಗೋಪಿಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಧ್ರುವಕುಮಾರ್, ಕಾಂಗ್ರೆಸ್ ಮುಖಂಡ ದೋರನಾಳು ಪರಮೇಶ್, ಚಿಂತಕ ಮನಸುಳಿ ಮೋಹನ್, ಕರ್ನಾಟಕ ದಕ್ಷಿಣ ವಲಯ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಜಿ.ಎಂ.ರಾಜಶೇಖರ್, ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ಜಿಲಾ ಅಧ್ಯಕ್ಷ ಹಾತೂರು ಪ್ರಭಾಕರ್ ಮಾತನಾಡಿದರು.

ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣನಾಯ್ಕ, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಪೆನ್ನಯ್ಯ, ಪತ್ರಕರ್ತ ಜಿ.ಟಿ.ರಮೇಶ್, ಎಸ್.ಕೆ.ಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT