ಶೆಟ್ಟಿಹಳ್ಳಿ ಗ್ರಾಮದ ಎಸ್.ಬಿ. ಮಲ್ಲಿಕಾರ್ಜುನ್ ಮಾತನಾಡಿ, ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದ ವಿದ್ಯುತ್ ಪರಿವರ್ತಕ ಮತ್ತು ಕಂಬಗಳು ವಾಲಿವೆ. ಇಲ್ಲಿ ಎಲ್ಲರೂ ಓಡಾಡುತ್ತಾರೆ. ವಿದ್ಯುತ್ ಅವಘಡ ಆಗದಂತೆ ಮೆಸ್ಕಾಂ ಅಧಿಕಾರಿಗಳು ದುರಸ್ತಿ ಮಾಡಬೇಕು ಎಂದು ಕೋರಿದರು.