ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟದ ಮನೆಗೆ ನಿರಂತರ ವಿದ್ಯುತ್ ಕಲ್ಪಿಸಲು ಮನವಿ

Last Updated 18 ಅಕ್ಟೋಬರ್ 2022, 4:50 IST
ಅಕ್ಷರ ಗಾತ್ರ

ಕಡೂರು: ತೋಟದಮನೆಗಳಿಗೆ ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಮತಿಗಾಗಿ ಪತ್ರ ಬರೆಯಲಾಗಿದೆ. ಮಂಜೂರಾತಿ ಆದೇಶ ದೊರಕಿದ ಕೂಡಲೇ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಎಇಇ ಮಂಜೇಗೌಡ ತಿಳಿಸಿದರು.

ಪಟ್ಟಣದ ಮೆಸ್ಕಾಂ ಉಪ ವಿಭಾಗೀಯ ಕಚೇರಿಯಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಗುಣಸಾಗರ ಭಾಗದ ರೈತರು ಸೇರಿದಂತೆ ಹಲವರು ಮನವಿ ಸಲ್ಲಿಸಿದ್ದಾರೆ, ಈ ಬಗ್ಗೆ ನಿಗಮದ ಕಚೇರಿಗೆ ಅನುಮತಿ ಕೋರಲಾಗಿದೆ ಎಂದು ಅವರು ವಿವರಿಸಿದರು.

ಶೆಟ್ಟಿಹಳ್ಳಿ ಗ್ರಾಮದ ಎಸ್.ಬಿ. ಮಲ್ಲಿಕಾರ್ಜುನ್ ಮಾತನಾಡಿ, ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದ ವಿದ್ಯುತ್ ಪರಿವರ್ತಕ ಮತ್ತು ಕಂಬಗಳು ವಾಲಿವೆ. ಇಲ್ಲಿ ಎಲ್ಲರೂ ಓಡಾಡುತ್ತಾರೆ. ವಿದ್ಯುತ್ ಅವಘಡ ಆಗದಂತೆ ಮೆಸ್ಕಾಂ ಅಧಿಕಾರಿಗಳು ದುರಸ್ತಿ ಮಾಡಬೇಕು ಎಂದು ಕೋರಿದರು.

ಪ್ರತಿಕ್ರಿಯಿಸಿದ ಮಂಜೇಗೌಡ, ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿ, ಪರಿವರ್ತಕ ಬದಲಾವಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿವರ್ತಕ ಬದಲಾವಣೆಗೆ ಮತ್ತು ಹೆಚ್ಚುವರಿ ಅಳವಡಿಸುವ ಕುರಿತು ಬಹಳಷ್ಟು ಗ್ರಾಹಕರು ಸಮಸ್ಯೆಗಳನ್ನು ತೋಡಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT