ಮೂಡಿಗೆರೆ: ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರಬೈಲ್ ಗ್ರಾಮಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಸಂಚಾರ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದು, ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳು, ಬಸ್ ಸೌಕರ್ಯ ಇಲ್ಲದೆ ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಪೋಷಕರೊಂದಿಗೆ ಕಾಫಿ ಕೊಯ್ಲಿನ ಕೂಲಿಗೆ ಹೋಗುತ್ತಿದ್ದಾರೆ.