ಶೃಂಗೇರಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಶರದ್ ಅರವಿಂದ ಬೊಬಡೆ ಅವರು ಶಾರದಾ ಮಠಕ್ಕೆ ಗುರುವಾರ ಭೇಟಿ ನೀಡಿದರು.
ಮುಖ್ಯನ್ಯಾಯಮೂರ್ತಿಯನ್ನು ಮಠದ ಆಡಳಿತಾಧಿಕಾರಿ ಡಾ.ವಿ.ಆರ್. ಗೌರೀಶಂಕರ್ ಮತ್ತು ಸಿಬ್ಬಂದಿಯು ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡರು. ಬಳಿಕ ಪೊಲೀಸ್ ಇಲಾಖೆಯ ಗೌರವವನ್ನು ಅವರು ಸ್ವೀಕರಿಸಿದರು. ಶಾರದಾಂಬೆ, ತೋರಣ ಗಣಪತಿ, ಶಂಕರಾಚಾರ್ಯ ದೇವಾಲಯಕ್ಕೆ ಭೇಟಿ ನೀಡಿದ ಅವರು, ವಿಶೇಷ ಪೂಜೆ ಸಲ್ಲಿಸಿದರು.
ನರಸಿಂಹವನದ ಗುರುನಿವಾಸಕ್ಕೆ ತೆರಳಿ ಮಠದ ಉಭಯ ಗುರುಗಳಾದ ಭಾರತೀತೀರ್ಥ ಸ್ವಾಮೀಜಿ ಮತ್ತು ವಿಧುಶೇಖರ ಭಾರತಿ ಸ್ವಾಮೀಜಿ ಅವರ ಆಶೀರ್ವಾದವನ್ನು ಅವರು ಪಡೆದರು. ಅವರು ಗುರುವಾರ ರಾತ್ರಿ ಶೃಂಗೇರಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.