<p><strong>ಚಿಕ್ಕಮಗಳೂರು</strong>: ತರೀಕೆರೆ ತಾಲ್ಲೂಕಿನ ಬಳ್ಳಾವರದಲ್ಲಿ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪದಲ್ಲಿ ಇಬ್ಬರು ನಿವೃತ್ತ ತಹಶೀಲ್ದಾರ್ ಮತ್ತು ಒಬ್ಬರು ಹಾಲಿ ತಹಶೀಲ್ದಾರ್ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ.</p>.<p>ಬಳ್ಳಾವರ ಗ್ರಾಮದ ಸರ್ವೆ ನಂಬರ್ 22ರಲ್ಲಿ 353 ಎಕರೆ ಭೂಮಿಯನ್ನು 1930ರಲ್ಲೇ ಅರಣ್ಯ ಭೂಮಿ ಎಂದು ಅಧಿಸೂಚಿಸಲಾಗಿದೆ. ಇದೇ ಜಾಗದಲ್ಲಿ 1999, 2005, 2022ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ತಹಶೀಲ್ದಾರ್ಗಳಾದ ಕೆ.ಎನ್.ನಾರಾಯಣಪ್ಪ, ಜಿ.ಎಸ್.ನಾಗರಾಜ್ ಮತ್ತು ಪೂರ್ಣಿಮಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಮೂವರಲ್ಲಿ ಪೂರ್ಣಿಮಾ ಅವರು ಸದ್ಯ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದಾರೆ. ಉಳಿದ ಇಬ್ಬರು ನಿವೃತ್ತಿ ಹೊಂದಿದ್ದಾರೆ. ತರೀಕೆರೆ ಜೆಎಂಎಫ್ಸಿ ನ್ಯಾಯಾಲಯದ ಅನುಮತಿ ಪಡೆದು ಈ ಮೂವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ತರೀಕೆರೆ ತಾಲ್ಲೂಕಿನ ಬಳ್ಳಾವರದಲ್ಲಿ ಅರಣ್ಯ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪದಲ್ಲಿ ಇಬ್ಬರು ನಿವೃತ್ತ ತಹಶೀಲ್ದಾರ್ ಮತ್ತು ಒಬ್ಬರು ಹಾಲಿ ತಹಶೀಲ್ದಾರ್ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್ ದಾಖಲಿಸಿದೆ.</p>.<p>ಬಳ್ಳಾವರ ಗ್ರಾಮದ ಸರ್ವೆ ನಂಬರ್ 22ರಲ್ಲಿ 353 ಎಕರೆ ಭೂಮಿಯನ್ನು 1930ರಲ್ಲೇ ಅರಣ್ಯ ಭೂಮಿ ಎಂದು ಅಧಿಸೂಚಿಸಲಾಗಿದೆ. ಇದೇ ಜಾಗದಲ್ಲಿ 1999, 2005, 2022ರಲ್ಲಿ ಖಾಸಗಿ ವ್ಯಕ್ತಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ತಹಶೀಲ್ದಾರ್ಗಳಾದ ಕೆ.ಎನ್.ನಾರಾಯಣಪ್ಪ, ಜಿ.ಎಸ್.ನಾಗರಾಜ್ ಮತ್ತು ಪೂರ್ಣಿಮಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ಮೂವರಲ್ಲಿ ಪೂರ್ಣಿಮಾ ಅವರು ಸದ್ಯ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದಾರೆ. ಉಳಿದ ಇಬ್ಬರು ನಿವೃತ್ತಿ ಹೊಂದಿದ್ದಾರೆ. ತರೀಕೆರೆ ಜೆಎಂಎಫ್ಸಿ ನ್ಯಾಯಾಲಯದ ಅನುಮತಿ ಪಡೆದು ಈ ಮೂವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>