<p><strong>ಚಿಕ್ಕಮಗಳೂರು</strong>: ‘ರಾಜ್ಯದಲ್ಲಿ ನೂರಕ್ಕೂ ಹೆಚ್ಚಿರುವ ಸಮಾಜದ ಉಪಪಂಗಡಗಳು ಒಂದಾಗುವ ಮೂಲಕ ವೀರಶೈವ ಲಿಂಗಾಯತರೆಂದು ಪ್ರತಿಪಾದಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ನಗರದ ಎಐಟಿ ಕಾಲೇಜು ಸಮೀಪದ ವೀರಶೈವ ಲಿಂಗಾಯಿತ ಸಮುದಾಯ ಭವನದಲ್ಲಿ ಶನಿವಾರ ನಡೆದ ರೇಣುಕಾಚಾರ್ಯ ಮತ್ತು ಬಸವೇಶ್ವರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವೀರಶೈವ ಮತ್ತು ಲಿಂಗಾಯತ ಸಮಾಜವು ಹಸುವಿನಂತೆ. ಹಿಂದೆ ಬಂದರೆ ಒಡೆಯುವುದಿಲ್ಲ, ಮುಂದೆ ಬಂದರೆ ಹಾಯುವುದಿಲ್ಲ. ನಾಡಿನ ಪ್ರತಿಯೊಂದು ಜಾತಿ, ಧರ್ಮ, ಸಮಾಜವನ್ನು ಜೊತೆಗೂಡಿಸಿಕೊಂಡು ಅಸುಯೆಪಡದೇ ಪ್ರೀತಿಯಿಂದ ಕಾಣುವ ಸಮಾಜ ವೀರಶೈವ-ಲಿಂಗಾಯಿತ ಎಂದು ಹೇಳಿದರು.</p>.<p>ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುನ್ನೆಲೆಗೆ ಕರೆತರಲು ಎಲ್ಲಾ ಉಪಪಂಗಡಗಳು ಒಂದಾಗುವುದು ಮುಖ್ಯ. ಬಸವಣ್ಣನವರ ಆದರ್ಶದಲ್ಲಿ ಸಾಗುತ್ತಿರುವ ಈ ಸಮುದಾಯ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ತಿಳಿಸಿದರು.</p>.<p>ಸರ್ಕಾರದ ಅನುದಾನ, ಸಮಾಜದ ಮುಖಂಡರು, ದಾನಿಗಳ ಸಹಕಾರದಿಂದ ಬೃಹತ್ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಅಂತಿಮವಾಗಿ ಪೂರ್ಣಗೊಳ್ಳುತ್ತಿರುವುದು ಸ್ವಾಗತಾರ್ಹ. ಹೀಗಾಗಿ ಸಮಾಜದ ಮಗಳಾಗಿ ತಾವು ಸಮುದಾಯ ಭವನಕ್ಕೆ ₹10 ಲಕ್ಷ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.</p>.<p>‘ನಿಸರ್ಗದ ಸೊಬಗು, ಸಂಸ್ಕೃತಿ, ಧಾರ್ಮಿಕತೆಯ ಪ್ರತೀಕದಿಂದ ಕೂಡಿರುವ ಜಿಲ್ಲೆ ಶ್ರೀಮಂತಿಕೆಯನ್ನು ಹೊಂದಿದೆ. ಇಲ್ಲಿನ ನಿವಾಸಿಗಳು ಸುಸಂಸ್ಕೃತ ಹಾಗೂ ಹೃದಯವಂತರು. ಜಿಲ್ಲೆಗೆ ಬಂದ ನನಗೆ ತವರು ಮನೆಯಂತೆ ಸ್ವಾಗತ ನೀಡಿರುವುದು ಸಂತಸ ತಂದಿದೆ’ ಎಂದರು.</p>.<p>ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಶೈಕ್ಷಣಿವಾಗಿ ಒಗ್ಗಟ್ಟಾಗಲು ಒಳಪಂಗಡ ಮರೆತು ವೀರಶೈವ-ಲಿಂಗಾಯಿತರು ಒಂದಾಗಬೇಕು. ಜತೆಗೆ ಸಮುದಾಯದ ಬೆಳವಣಿಗೆಗೆ ಸಹಕರಿಸಬೇಕು’ ಎಂದು ತಿಳಿಸಿದರು.</p>.<p>ನೂತನ ಸಮುದಾಯ ಭವನಕ್ಕೆ ಪಕ್ಷಾತೀತವಾಗಿ ಎಲ್ಲರೂ ಆರ್ಥಿಕವಾಗಿ ಕೈಜೋಡಿಸಿದ್ದಾರೆ. ಬಾಕಿ ಕೆಲಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ನಿಯೋಗ ತೆರಳಿ ಉಳಿದ ಕೆಲಸಕ್ಕೆ ಅನುದಾನ ಕೋರಲಾಗುವುದು. ಕೂಡಲೇ ಭವನ ಲೋಕಾರ್ಪಣೆ ಮಾಡಲಾಗುವುದು ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ‘ಬಸವೇಗೌಡ ಕುಟುಂಬದವರ ಸಹಕಾರದಿಂದ ಪ್ರಾರಂಭಿಸಿದ ಸಮುದಾಯ ಭವನವು 9 ಎಕರೆ ಪ್ರದೇಶದಲ್ಲಿ ಅಚ್ಚುಕಟ್ಟಾಗಿ ನಿರ್ಮಾಣವಾಗುತ್ತಿದೆ. ಜತೆಗೆ ಶಾಸಕರು ಸಮಾಜದ ಬಗ್ಗೆ ಕಾಳಜಿ ವಹಿಸಿ ₹2 ಕೋಟಿ ಅನುದಾನ ಒದಗಿಸಿಕೊಟ್ಟಿದ್ದಾರೆ’ ಎಂದು ಹೇಳಿದರು.</p>.<p>ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಬಿ.ಎ.ಶಿವಶಂಕರ್ ವಹಿಸಿದ್ದರು. ನೈಸರ್ಗಿಕ ಕೃಷಿಕ ಚಂದ್ರಶೇಖರ ನಾರಣಾಪುರ ಅವರು ರೇಣುಕಾಚಾರ್ಯ ಮತ್ತು ಬಸವೇಶ್ವರರ ಕುರಿತು ಉಪನ್ಯಾಸ ನೀಡಿದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಲೋಕೇಶ್, ಉಪಾಧ್ಯಕ್ಷ ಎಚ್.ಎನ್.ನಂಜೇಗೌಡ, ಕಾಫಿ ಬೆಳೆಗಾರ ಎ.ಬಿ.ಸುದರ್ಶನ್, ಎಚ್.ಎಂ.ರೇಣುಕಾರಾಧ್ಯ, ಎಂ.ಎಸ್.ನಿರಂಜನ್, ಕಾರ್ಯದರ್ಶಿಗಳಾದ ಸಿ.ಬಿ.ನಂದೀಶ್, ಡಿ.ಎಸ್.ಮಮತ, ಖಜಾಂಚಿ ಎಸ್.ದೇವರಾಜ್, ಮುಖಂಡರಾದ ಕೆ.ಸಿ.ನಿಶಾಂತ್, ದಿವಾಕರ್, ಬಸವರಾಜು, ಜಗದೀಶ್, ಜಿ.ಕೆ.ನಂಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ರಾಜ್ಯದಲ್ಲಿ ನೂರಕ್ಕೂ ಹೆಚ್ಚಿರುವ ಸಮಾಜದ ಉಪಪಂಗಡಗಳು ಒಂದಾಗುವ ಮೂಲಕ ವೀರಶೈವ ಲಿಂಗಾಯತರೆಂದು ಪ್ರತಿಪಾದಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.</p>.<p>ನಗರದ ಎಐಟಿ ಕಾಲೇಜು ಸಮೀಪದ ವೀರಶೈವ ಲಿಂಗಾಯಿತ ಸಮುದಾಯ ಭವನದಲ್ಲಿ ಶನಿವಾರ ನಡೆದ ರೇಣುಕಾಚಾರ್ಯ ಮತ್ತು ಬಸವೇಶ್ವರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವೀರಶೈವ ಮತ್ತು ಲಿಂಗಾಯತ ಸಮಾಜವು ಹಸುವಿನಂತೆ. ಹಿಂದೆ ಬಂದರೆ ಒಡೆಯುವುದಿಲ್ಲ, ಮುಂದೆ ಬಂದರೆ ಹಾಯುವುದಿಲ್ಲ. ನಾಡಿನ ಪ್ರತಿಯೊಂದು ಜಾತಿ, ಧರ್ಮ, ಸಮಾಜವನ್ನು ಜೊತೆಗೂಡಿಸಿಕೊಂಡು ಅಸುಯೆಪಡದೇ ಪ್ರೀತಿಯಿಂದ ಕಾಣುವ ಸಮಾಜ ವೀರಶೈವ-ಲಿಂಗಾಯಿತ ಎಂದು ಹೇಳಿದರು.</p>.<p>ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುನ್ನೆಲೆಗೆ ಕರೆತರಲು ಎಲ್ಲಾ ಉಪಪಂಗಡಗಳು ಒಂದಾಗುವುದು ಮುಖ್ಯ. ಬಸವಣ್ಣನವರ ಆದರ್ಶದಲ್ಲಿ ಸಾಗುತ್ತಿರುವ ಈ ಸಮುದಾಯ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ತಿಳಿಸಿದರು.</p>.<p>ಸರ್ಕಾರದ ಅನುದಾನ, ಸಮಾಜದ ಮುಖಂಡರು, ದಾನಿಗಳ ಸಹಕಾರದಿಂದ ಬೃಹತ್ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಅಂತಿಮವಾಗಿ ಪೂರ್ಣಗೊಳ್ಳುತ್ತಿರುವುದು ಸ್ವಾಗತಾರ್ಹ. ಹೀಗಾಗಿ ಸಮಾಜದ ಮಗಳಾಗಿ ತಾವು ಸಮುದಾಯ ಭವನಕ್ಕೆ ₹10 ಲಕ್ಷ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.</p>.<p>‘ನಿಸರ್ಗದ ಸೊಬಗು, ಸಂಸ್ಕೃತಿ, ಧಾರ್ಮಿಕತೆಯ ಪ್ರತೀಕದಿಂದ ಕೂಡಿರುವ ಜಿಲ್ಲೆ ಶ್ರೀಮಂತಿಕೆಯನ್ನು ಹೊಂದಿದೆ. ಇಲ್ಲಿನ ನಿವಾಸಿಗಳು ಸುಸಂಸ್ಕೃತ ಹಾಗೂ ಹೃದಯವಂತರು. ಜಿಲ್ಲೆಗೆ ಬಂದ ನನಗೆ ತವರು ಮನೆಯಂತೆ ಸ್ವಾಗತ ನೀಡಿರುವುದು ಸಂತಸ ತಂದಿದೆ’ ಎಂದರು.</p>.<p>ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ಶೈಕ್ಷಣಿವಾಗಿ ಒಗ್ಗಟ್ಟಾಗಲು ಒಳಪಂಗಡ ಮರೆತು ವೀರಶೈವ-ಲಿಂಗಾಯಿತರು ಒಂದಾಗಬೇಕು. ಜತೆಗೆ ಸಮುದಾಯದ ಬೆಳವಣಿಗೆಗೆ ಸಹಕರಿಸಬೇಕು’ ಎಂದು ತಿಳಿಸಿದರು.</p>.<p>ನೂತನ ಸಮುದಾಯ ಭವನಕ್ಕೆ ಪಕ್ಷಾತೀತವಾಗಿ ಎಲ್ಲರೂ ಆರ್ಥಿಕವಾಗಿ ಕೈಜೋಡಿಸಿದ್ದಾರೆ. ಬಾಕಿ ಕೆಲಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ನಿಯೋಗ ತೆರಳಿ ಉಳಿದ ಕೆಲಸಕ್ಕೆ ಅನುದಾನ ಕೋರಲಾಗುವುದು. ಕೂಡಲೇ ಭವನ ಲೋಕಾರ್ಪಣೆ ಮಾಡಲಾಗುವುದು ಎಂದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ‘ಬಸವೇಗೌಡ ಕುಟುಂಬದವರ ಸಹಕಾರದಿಂದ ಪ್ರಾರಂಭಿಸಿದ ಸಮುದಾಯ ಭವನವು 9 ಎಕರೆ ಪ್ರದೇಶದಲ್ಲಿ ಅಚ್ಚುಕಟ್ಟಾಗಿ ನಿರ್ಮಾಣವಾಗುತ್ತಿದೆ. ಜತೆಗೆ ಶಾಸಕರು ಸಮಾಜದ ಬಗ್ಗೆ ಕಾಳಜಿ ವಹಿಸಿ ₹2 ಕೋಟಿ ಅನುದಾನ ಒದಗಿಸಿಕೊಟ್ಟಿದ್ದಾರೆ’ ಎಂದು ಹೇಳಿದರು.</p>.<p>ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಬಿ.ಎ.ಶಿವಶಂಕರ್ ವಹಿಸಿದ್ದರು. ನೈಸರ್ಗಿಕ ಕೃಷಿಕ ಚಂದ್ರಶೇಖರ ನಾರಣಾಪುರ ಅವರು ರೇಣುಕಾಚಾರ್ಯ ಮತ್ತು ಬಸವೇಶ್ವರರ ಕುರಿತು ಉಪನ್ಯಾಸ ನೀಡಿದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಂ.ಲೋಕೇಶ್, ಉಪಾಧ್ಯಕ್ಷ ಎಚ್.ಎನ್.ನಂಜೇಗೌಡ, ಕಾಫಿ ಬೆಳೆಗಾರ ಎ.ಬಿ.ಸುದರ್ಶನ್, ಎಚ್.ಎಂ.ರೇಣುಕಾರಾಧ್ಯ, ಎಂ.ಎಸ್.ನಿರಂಜನ್, ಕಾರ್ಯದರ್ಶಿಗಳಾದ ಸಿ.ಬಿ.ನಂದೀಶ್, ಡಿ.ಎಸ್.ಮಮತ, ಖಜಾಂಚಿ ಎಸ್.ದೇವರಾಜ್, ಮುಖಂಡರಾದ ಕೆ.ಸಿ.ನಿಶಾಂತ್, ದಿವಾಕರ್, ಬಸವರಾಜು, ಜಗದೀಶ್, ಜಿ.ಕೆ.ನಂಜೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>