ಕೊಟ್ಟಿಗೆಹಾರ: ಬಣಕಲ್ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಸ್ವಚ್ಛತೆಯೇ ಸೇವೆ ಅಭಿಯಾನ ನಡೆಯಿತು.
ಗ್ರಾಮ ಪಂಚಾಯಿತಿ ಪಿಡಿಒ ಬಿ.ಎನ್. ಕೃಷ್ಣಪ್ಪ ಮಾತನಾಡಿ 'ಸ್ವಚ್ಛತಾ ಹಿ ಸೇವಾ ಅಭಿಯಾನವು ಸ್ವಚ್ಛತೆಗಾಗಿ ಸಮುದಾಯದ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತದೆ’ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಮಧುಕುಮಾರ್ ಮಾತನಾಡಿ 'ಈ ಅಭಿಯಾನವು ವ್ಯಕ್ತಿಗಳು, ಸಮುದಾಯಗಳು ಮತ್ತು ಸರ್ಕಾರಿ ಸಂಸ್ಥೆಗಳು ಸಮಾನ ದೃಷ್ಟಿಯೊಂದಿಗೆ ಒಗ್ಗೂಡಿದಾಗ ಮತ್ತು ಸ್ವಚ್ಛತೆಯನ್ನು ಸಮರೋಪಾದಿಯಲ್ಲಿ ಮಾಡಿದಾಗ ಗಮನಾರ್ಹ ಸಾಧನೆಗಳನ್ನು ಸಾಧಿಸಬಹುದು ಎಂಬುದನ್ನು ಎತ್ತಿ ತೋರಿಸುತ್ತದೆ' ಎಂದರು.
ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಅಭಿಯಾನದಲ್ಲಿ ಭಾಗವಹಿಸಿದ್ದರು.