<p><strong>ಚಿಕ್ಕಮಗಳೂರು</strong>: ‘ನಗರ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಿದೆ. ತಗ್ಗಿನ ಪ್ರದೇಶಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,‘ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಿ ತೊಂದರೆಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ಡಿಆರ್ಎಫ್, ಗೃಹ ರಕ್ಷಕ ದಳ, ಪೊಲೀಸ್ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ’ ಎಂದರು.</p>.<p>‘ಬಿಬಿಎಂಪಿಯವರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತೊಂದರೆಯಾಗದಂತೆ ಕ್ರಮ ವಹಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಮಳೆಯಾಗುತ್ತಿರುವುದರಿಂದ ರೈತರು ಮುಂಗಾರು ಬಿತ್ತನೆಗೆ ತಯಾರಿಯಲ್ಲಿ ತೊಡಗಿದ್ದಾರೆ. ಬೀಜ, ಗೊಬ್ಬರ ಪೂರೈಕೆ ನಿಟ್ಟಿನಲ್ಲಿ ಸೂಚನೆ ನೀಡಿದ್ದೇನೆ. ಡಿಎಪಿ ಗೊಬ್ಬರಕ್ಕೆ ಬೇಡಿಕೆ ಹೆಚ್ಚು ಇದೆ. ಡಿಎಪಿ ತರಿಸಲು ವ್ಯವಸ್ಥೆ ಮಾಡಿದ್ದೇವೆ’ ಎಂದು ತಿಳಿಸಿದರು.</p>.<p>‘ಚಿಕ್ಕಮಗಳೂರು ಜಿಲ್ಲೆಯು ನಿಸರ್ಗ ಸಮದ್ಧವಾಗಿದೆ. ಇಡೀ ರಾಜ್ಯಕ್ಕೆ ಹಂಚುವಷ್ಟು ನಿಸರ್ಗ ಸೊಬಗು ಇಲ್ಲಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಭರವಸೆ ನೀಡಿರುವ ಎಲ್ಲವನ್ನು ಕಾರ್ಯಗತಗೊಳಿಸುತ್ತೇನೆ. ಪ್ರವಾಸೋದ್ಯಮ ಅಭಿವೃದ್ಧಿ ಸಹಿತ ಎಲ್ಲ ಕ್ಷೇತ್ರಗಳಿಗೂ ಒತ್ತು ನೀಡುತ್ತೇವೆ. ಈ ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ಶೀಘ್ರದಲ್ಲಿ ನೇಮಕ ಮಾಡುತ್ತೇವೆ’ ಎಂದರು.</p>.<p>‘2019ರಲ್ಲಿ ಮೂಡಿಗೆರೆ ತಾಲ್ಲೂಕಿನಲ್ಲಿ ಸಂಭವಿಸಿದ್ದ ಅತಿವೃಷ್ಟಿ ಹಾನಿ ಪರಿಹಾರ ಒದಗಿಸಲು ಗಮನಹರಿಸುತ್ತೇನೆ. ವರದಿ ಪಡೆದು ಪರಿಶೀಲಿಸಿ ಕ್ರಮವಹಿಸುತ್ತೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ನಗರ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಿದೆ. ತಗ್ಗಿನ ಪ್ರದೇಶಗಳ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,‘ಬೆಂಗಳೂರಿನಲ್ಲಿ ಹೆಚ್ಚು ಮಳೆಯಾಗಿ ತೊಂದರೆಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಕೆಲ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ಡಿಆರ್ಎಫ್, ಗೃಹ ರಕ್ಷಕ ದಳ, ಪೊಲೀಸ್ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ’ ಎಂದರು.</p>.<p>‘ಬಿಬಿಎಂಪಿಯವರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತೊಂದರೆಯಾಗದಂತೆ ಕ್ರಮ ವಹಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.</p>.<p>‘ಮಳೆಯಾಗುತ್ತಿರುವುದರಿಂದ ರೈತರು ಮುಂಗಾರು ಬಿತ್ತನೆಗೆ ತಯಾರಿಯಲ್ಲಿ ತೊಡಗಿದ್ದಾರೆ. ಬೀಜ, ಗೊಬ್ಬರ ಪೂರೈಕೆ ನಿಟ್ಟಿನಲ್ಲಿ ಸೂಚನೆ ನೀಡಿದ್ದೇನೆ. ಡಿಎಪಿ ಗೊಬ್ಬರಕ್ಕೆ ಬೇಡಿಕೆ ಹೆಚ್ಚು ಇದೆ. ಡಿಎಪಿ ತರಿಸಲು ವ್ಯವಸ್ಥೆ ಮಾಡಿದ್ದೇವೆ’ ಎಂದು ತಿಳಿಸಿದರು.</p>.<p>‘ಚಿಕ್ಕಮಗಳೂರು ಜಿಲ್ಲೆಯು ನಿಸರ್ಗ ಸಮದ್ಧವಾಗಿದೆ. ಇಡೀ ರಾಜ್ಯಕ್ಕೆ ಹಂಚುವಷ್ಟು ನಿಸರ್ಗ ಸೊಬಗು ಇಲ್ಲಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಭರವಸೆ ನೀಡಿರುವ ಎಲ್ಲವನ್ನು ಕಾರ್ಯಗತಗೊಳಿಸುತ್ತೇನೆ. ಪ್ರವಾಸೋದ್ಯಮ ಅಭಿವೃದ್ಧಿ ಸಹಿತ ಎಲ್ಲ ಕ್ಷೇತ್ರಗಳಿಗೂ ಒತ್ತು ನೀಡುತ್ತೇವೆ. ಈ ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ಶೀಘ್ರದಲ್ಲಿ ನೇಮಕ ಮಾಡುತ್ತೇವೆ’ ಎಂದರು.</p>.<p>‘2019ರಲ್ಲಿ ಮೂಡಿಗೆರೆ ತಾಲ್ಲೂಕಿನಲ್ಲಿ ಸಂಭವಿಸಿದ್ದ ಅತಿವೃಷ್ಟಿ ಹಾನಿ ಪರಿಹಾರ ಒದಗಿಸಲು ಗಮನಹರಿಸುತ್ತೇನೆ. ವರದಿ ಪಡೆದು ಪರಿಶೀಲಿಸಿ ಕ್ರಮವಹಿಸುತ್ತೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>