ಪ್ರತಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನವಂಬರ್ 15 ರಂದು ಮಧ್ಯಾಹ್ನ 12.30ಕ್ಕೆ ತಾಲ್ಲೂಕು ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವಣಗೂಳಿಸುವರು. ನಂತರ ಕಡೂರು, ತರೀಕೆರೆ, ಅಜ್ಜಂಪುರ ತಾಲ್ಲೂಕುಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆಗೆ ಭೂಮಿ ಪೂಜೆ ಸಲ್ಲಿಸುವರು. ದೋರನಾಳು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಚಾಲನೆ ನೀಡುವರು. ಭದ್ರಾ ಉಪ ಕಣವೆಯಿಂದ ತಾಲ್ಲೂಕಿನ 56 ಕೆರೆಗಳಿಗೆ ನೀರು ಹರಿಸುವ ಕಾಮಗಾರಿ ವೀಕ್ಷಣೆ ಮಾಡಿ, ಎಸ್ಜೆಎಂ ಕಾಜೇಜು ಆವರಣದಲ್ಲಿ ಕಾರ್ಯಕರ್ತರು ಆಯೋಜಿಸಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.