ಪ್ರವಾಸೋದ್ಯಮ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಟಿ.ಡಿ. ರಾಜೇಗೌಡ ಪಾಲ್ಗೊಳ್ಳುವರು. ಇದೇ ಸಂದಭದಲ್ಲಿ ಅಥಣಿಯ ಮಾಸ್ಟರ್ ಬಸವರಾಜ ಶಂಕರ ಉಮರಾಣಿ ಅವರಿಗೆ ಪೀಠದ ಅತ್ಯುನ್ನತವಾದ ‘ಜಗದ್ಗುರು ರೇಣುಕಾಚಾರ್ಯ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ₹ 1 ಲಕ್ಷ ನಗದು, ಸ್ಮರಣಿಕೆ, ಗೌರವಪತ್ರ, ಉಡುಗೊರೆ ಒಳಗೊಂಡಿದೆ. ಎಡೆಯೂರು ರೇಣುಕ ಸ್ವಾಮೀಜಿ, ಮಾನಿಹಳ್ಳಿ ಮಳೆ ಶಿವಯೋಗೀಶ್ವರ ಸ್ವಾಮೀಜಿ, ಶಿವಗಂಗೆಯ ಮಲಯ ಶಾಂತಮುನಿ ಸ್ವಾಮೀಜಿ ಭಾಗವಹಿಸಲಿದ್ದಾರೆ.