ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ಕಾರ್ಯಕ್ರಮದಲ್ಲಿ ಮಾತನಾಡಿ, ‘ಎಲ್ಲ ವಾರ್ಡ್ಗಳಲ್ಲಿ ಪ್ರತಿನಿತ್ಯ ಆಟೋ ಟಿಪ್ಪರ್ಗಳಲ್ಲಿ ಮನೆಮನೆ ಕಸ ಸಂಗ್ರಹಿಸಲಾಗುತ್ತಿದೆ. ಆದರೂ ಕೆಲವರು ಕಸವನ್ನು ನಿವೇಶನ, ಚರಂಡಿಗೆ ಬಿಸಾಕುತ್ತಾರೆ. ನಗರದ ನೈರ್ಮಲ್ಯ ಹಾಳಾಗುತ್ತಿದೆ. ಜನರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ, ಕಸ ಎಸೆಯದಂತೆ ಜನರಿಗೆ ಹೆದರಿಕೆ ಮೂಡಿಸಲು ಈ ಹೊಸ ಪ್ರಯೋಗಕ್ಕೆ ಮುಂದಾಗಿದ್ದೇವೆ’ ಎಂದು ತಿಳಿಸಿದರು.