<p><strong>ಮೂಡಿಗೆರೆ:</strong> ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಕಳವು ಪ್ರಕರಣ ಬೇಧಿಸಿರುವ ಪೊಲೀಸರು, ಆರು ಮಂದಿಯನ್ನು ಬಂಧಿಸಿ, ಸುಮಾರು ₹3.5 ಲಕ್ಷ ಮೌಲ್ಯದ ಕಾಫಿ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಸಕಲೇಶಪುರ ಮೂಲದ ಕೌಶಿಕ್, ನಾಗರಾಜ್, ಪ್ರಶಾಂತ್, ಭರತ್, ಶಿಶಿರಶಂಕರ್, ಮನುಗೌಡ ಬಂಧಿತ ಆರೋಪಿಗಳು.</p>.<p>ತಾಲ್ಲೂಕಿನ ಕಸ್ಕೇಬೈಲ್ ಗ್ರಾಮದ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ರಂಗಸ್ವಾಮಿ ಅವರಿಗೆ ಸೇರಿದ ಗೋದಾಮಿನಲ್ಲಿ 2025ರ ಮೇ 10ರಂದು ₹1.4 ಲಕ್ಷ ಮೌಲ್ಯದ ಕಾಫಿ ಕಳ್ಳತನ ನಡೆದಿತ್ತು. ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಎಸ್ಟೇಟಿನಲ್ಲಿ 2025ರ ನವೆಂಬರ್ 30ರಂದು ₹2.80 ಲಕ್ಷ ಮೌಲ್ಯದ ಕಾಫಿ ಕಳ್ಳತನವಾಗಿತ್ತು. ಎರಡೂ ಪ್ರಕರಣಗಳ ತನಿಖೆಯನ್ನು ಕೈಗೊಂಡ ಪೊಲೀಸರು, ಇದೇ ಎಸ್ಟೇಟಿನಲ್ಲಿ ಕೆಲಸ ಮಾಡುತ್ತಿದ್ದ ಸಕಲೇಶಪುರ ಮೂಲದ ಕೌಶಿಕ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಆರೋಪಿಗಳಿಂದ ಕಳವಾಗಿದ್ದ ಕಾಫಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದು, ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.</p>.<p>ಕೃತ್ಯದಲ್ಲಿ ಭಾಗಿಯಾಗಿದ್ದ ಗೌತಮ್ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಡಿವೈಎಸ್ ಪಿ ಕೆ.ಆರ್.ನಾಗರಾಜ್ ನಿರ್ದೇಶನದಂತೆ ಮೂಡಿಗೆರೆ ಸರ್ಕಲ್ ಇನ್ ಸ್ಪೆಕ್ಟರ್ ರಾಜಶೇಖರ್, ಗೋಣಿಬೀಡು ಪಿಎಸ್ಐ ಹರ್ಷಗೌಡ, ಅಪರಾಧ ವಿಭಾಗದ ಪಿಎಸ್ಐ ಹೇಮಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಕಳವು ಪ್ರಕರಣ ಬೇಧಿಸಿರುವ ಪೊಲೀಸರು, ಆರು ಮಂದಿಯನ್ನು ಬಂಧಿಸಿ, ಸುಮಾರು ₹3.5 ಲಕ್ಷ ಮೌಲ್ಯದ ಕಾಫಿ ಹಾಗೂ ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಸಕಲೇಶಪುರ ಮೂಲದ ಕೌಶಿಕ್, ನಾಗರಾಜ್, ಪ್ರಶಾಂತ್, ಭರತ್, ಶಿಶಿರಶಂಕರ್, ಮನುಗೌಡ ಬಂಧಿತ ಆರೋಪಿಗಳು.</p>.<p>ತಾಲ್ಲೂಕಿನ ಕಸ್ಕೇಬೈಲ್ ಗ್ರಾಮದ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ರಂಗಸ್ವಾಮಿ ಅವರಿಗೆ ಸೇರಿದ ಗೋದಾಮಿನಲ್ಲಿ 2025ರ ಮೇ 10ರಂದು ₹1.4 ಲಕ್ಷ ಮೌಲ್ಯದ ಕಾಫಿ ಕಳ್ಳತನ ನಡೆದಿತ್ತು. ಘಟನೆ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಎಸ್ಟೇಟಿನಲ್ಲಿ 2025ರ ನವೆಂಬರ್ 30ರಂದು ₹2.80 ಲಕ್ಷ ಮೌಲ್ಯದ ಕಾಫಿ ಕಳ್ಳತನವಾಗಿತ್ತು. ಎರಡೂ ಪ್ರಕರಣಗಳ ತನಿಖೆಯನ್ನು ಕೈಗೊಂಡ ಪೊಲೀಸರು, ಇದೇ ಎಸ್ಟೇಟಿನಲ್ಲಿ ಕೆಲಸ ಮಾಡುತ್ತಿದ್ದ ಸಕಲೇಶಪುರ ಮೂಲದ ಕೌಶಿಕ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.</p>.<p>ಆರೋಪಿಗಳಿಂದ ಕಳವಾಗಿದ್ದ ಕಾಫಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದು, ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.</p>.<p>ಕೃತ್ಯದಲ್ಲಿ ಭಾಗಿಯಾಗಿದ್ದ ಗೌತಮ್ ಎಂಬ ಆರೋಪಿ ತಲೆ ಮರೆಸಿಕೊಂಡಿದ್ದು, ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಡಿವೈಎಸ್ ಪಿ ಕೆ.ಆರ್.ನಾಗರಾಜ್ ನಿರ್ದೇಶನದಂತೆ ಮೂಡಿಗೆರೆ ಸರ್ಕಲ್ ಇನ್ ಸ್ಪೆಕ್ಟರ್ ರಾಜಶೇಖರ್, ಗೋಣಿಬೀಡು ಪಿಎಸ್ಐ ಹರ್ಷಗೌಡ, ಅಪರಾಧ ವಿಭಾಗದ ಪಿಎಸ್ಐ ಹೇಮಾ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>