<p><strong>ತರೀಕೆರೆ:</strong> ಪಟ್ಟಣದ ಅರುಣೋದಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಹರಿಹರದ ರಾಮಕೃಷ್ಣ- ವಿವೇಕಾನಂದ ಆಶ್ರಮದ ಮುಖ್ಯಸ್ಥ ಆತ್ಮದೀಪಾನಂದ ಮಹಾರಾಜ್ ಸ್ವಾಮೀಜಿ ಆಶೀರ್ವಚನ ಮಾಡಿ, ‘ಜ್ಞಾನ ಮತ್ತು ಏಕಾಗ್ರತೆಯ ಶಕ್ತಿ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಅದನ್ನು ನಾವು ಜಾಗೃತಗೊಳಿಸಬೇಕು. ಏಕಾಗ್ರತೆಯ ಮಟ್ಟ ಯಾರಲ್ಲಿ ಹೆಚ್ಚಿರುತ್ತದೆಯೋ ಅವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದರು.</p>.<p>ಪ್ರಯತ್ನಶೀಲತೆ, ಶಿಸ್ತು, ಸಂಯಮ, ಸಮಯಪ್ರಜ್ಞೆ ಹಾಗೂ ಏಕಾಗ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಖಂಡಿತ ನಮ್ಮದಾಗುತ್ತದೆ. ಮಕ್ಕಳು ಯಾವಾಗಲೂ ಶಾರೀರಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು. ಸಾಮಾಜಿಕ ಜಾಲತಾಣದಿಂದ ದೂರವಿರಬೇಕು ಎಂದರು. </p>.<p>ಮಕ್ಕಳ ಜೀವನ ಶೈಲಿಯಲ್ಲಿ ಸಕಾರಾತ್ಮಕ ಬದಲಾವಣೆ ತರಲು ಹಾಗೂ ಜಾತಿ, ಮತ, ಭೇದವಿಲ್ಲದ ದೇಶದ ಶ್ರೇಷ್ಠ ಸತ್ಪ್ರಜೆಗಳನ್ನು ರೂಪಿಸಲು ಶಾಲೆಗಳಲ್ಲಿ ಇಂತಹ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಎಚ್ ಶ್ರೀಹರ್ಷ ಹೇಳಿದರು.</p>.<p>ಟ್ರಸ್ಟಿ ಗೀತಾಹರ್ಷ, ಮುಖ್ಯಶಿಕ್ಷಕಿ ಗೌರಮ್ಮ, ಸಹಶಿಕ್ಷಕರು ಉಪಸ್ಥಿತರಿದ್ದರು. ಜ್ಯೋತಿ ಸತೀಶ್ ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ಪಟ್ಟಣದ ಅರುಣೋದಯ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದಲ್ಲಿ ಹರಿಹರದ ರಾಮಕೃಷ್ಣ- ವಿವೇಕಾನಂದ ಆಶ್ರಮದ ಮುಖ್ಯಸ್ಥ ಆತ್ಮದೀಪಾನಂದ ಮಹಾರಾಜ್ ಸ್ವಾಮೀಜಿ ಆಶೀರ್ವಚನ ಮಾಡಿ, ‘ಜ್ಞಾನ ಮತ್ತು ಏಕಾಗ್ರತೆಯ ಶಕ್ತಿ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಅದನ್ನು ನಾವು ಜಾಗೃತಗೊಳಿಸಬೇಕು. ಏಕಾಗ್ರತೆಯ ಮಟ್ಟ ಯಾರಲ್ಲಿ ಹೆಚ್ಚಿರುತ್ತದೆಯೋ ಅವರು ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದರು.</p>.<p>ಪ್ರಯತ್ನಶೀಲತೆ, ಶಿಸ್ತು, ಸಂಯಮ, ಸಮಯಪ್ರಜ್ಞೆ ಹಾಗೂ ಏಕಾಗ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಖಂಡಿತ ನಮ್ಮದಾಗುತ್ತದೆ. ಮಕ್ಕಳು ಯಾವಾಗಲೂ ಶಾರೀರಿಕ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು. ಸಾಮಾಜಿಕ ಜಾಲತಾಣದಿಂದ ದೂರವಿರಬೇಕು ಎಂದರು. </p>.<p>ಮಕ್ಕಳ ಜೀವನ ಶೈಲಿಯಲ್ಲಿ ಸಕಾರಾತ್ಮಕ ಬದಲಾವಣೆ ತರಲು ಹಾಗೂ ಜಾತಿ, ಮತ, ಭೇದವಿಲ್ಲದ ದೇಶದ ಶ್ರೇಷ್ಠ ಸತ್ಪ್ರಜೆಗಳನ್ನು ರೂಪಿಸಲು ಶಾಲೆಗಳಲ್ಲಿ ಇಂತಹ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳ ಅವಶ್ಯಕತೆ ಇದೆ ಎಂದು ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ಎಚ್ ಶ್ರೀಹರ್ಷ ಹೇಳಿದರು.</p>.<p>ಟ್ರಸ್ಟಿ ಗೀತಾಹರ್ಷ, ಮುಖ್ಯಶಿಕ್ಷಕಿ ಗೌರಮ್ಮ, ಸಹಶಿಕ್ಷಕರು ಉಪಸ್ಥಿತರಿದ್ದರು. ಜ್ಯೋತಿ ಸತೀಶ್ ವಂದನಾರ್ಪಣೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>