<p><strong>ಕಳಸ</strong>: ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಶುಕ್ರವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರನ್ನು ಪಟ್ಟಣದಲ್ಲಿ ಅಭಿನಂದಿಸಲಾಯಿತು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಮುಖಂಡ ಶೇಷಗಿರಿ, ‘ಕಳಸ ತಾಲ್ಲೂಕಿನಲ್ಲಿ ಬಿಜೆಪಿ ಎಲ್ಲ ಮತಕೇಂದ್ರಗಳಲ್ಲೂ ಮುನ್ನಡೆ ಗಳಿಸಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಕುರಿತು ಗಮನ ಹರಿಸಬೇಕು’ ಎಂದರು</p>.<p>ಜೆಡಿಎಸ್ ಮುಖಂಡ ಮಂಜಪ್ಪಯ್ಯ ಮಾತನಾಡಿ, ‘ಕಳಸದಲ್ಲಿ ಉತ್ತಮ ಗುಣಮಟ್ಟದ ವಿದ್ಯಾಸಂಸ್ಥೆ ಸ್ಥಾಪನೆ ಆಗಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದು, ಈ ಕುರಿತು ಸಂಸದರು, ಶಾಸಕರು ಗಮನ ಹರಿಸಬೇಕು’ ಎಂದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ‘ಕಳಸದ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳ ಪರಿಹಾರಕ್ಕೆ ಆದ್ಯತೆ ಮೇರೆಗೆ ಕೆಲಸ ಮಾಡುತ್ತೇನೆ’ ಎಂದರು.</p>.<p>ಬಿಜೆಪಿ ಮುಖಂಡ ಸಿ.ಟಿ. ರವಿ ಮಾತನಾಡಿ, ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರ ಮೇಲೆ ತೆರಿಗೆಗಳ ಭಾರ ಹೊರಿಸುತ್ತಿದೆ. ಕಳಸದ ಬೇಡಿಕೆಗಳ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ದನಿ ಎತ್ತುತ್ತೇನೆ’ ಎಂದರು. </p>.<p>ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ನಾಗಭೂಷಣ್, ಶ್ರೀಕಾಂತ್, ಜೆಡಿಎಸ್ ಮುಖಂಡರಾದ ಜ್ವಾಲನಯ್ಯ, ಸಂತೋಷ್, ಮಹೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ಬಿಜೆಪಿ ಮತ್ತು ಜೆಡಿಎಸ್ ವತಿಯಿಂದ ಶುಕ್ರವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರನ್ನು ಪಟ್ಟಣದಲ್ಲಿ ಅಭಿನಂದಿಸಲಾಯಿತು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ಮುಖಂಡ ಶೇಷಗಿರಿ, ‘ಕಳಸ ತಾಲ್ಲೂಕಿನಲ್ಲಿ ಬಿಜೆಪಿ ಎಲ್ಲ ಮತಕೇಂದ್ರಗಳಲ್ಲೂ ಮುನ್ನಡೆ ಗಳಿಸಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಕುರಿತು ಗಮನ ಹರಿಸಬೇಕು’ ಎಂದರು</p>.<p>ಜೆಡಿಎಸ್ ಮುಖಂಡ ಮಂಜಪ್ಪಯ್ಯ ಮಾತನಾಡಿ, ‘ಕಳಸದಲ್ಲಿ ಉತ್ತಮ ಗುಣಮಟ್ಟದ ವಿದ್ಯಾಸಂಸ್ಥೆ ಸ್ಥಾಪನೆ ಆಗಬೇಕು. ಕಾಡುಪ್ರಾಣಿಗಳ ಹಾವಳಿಯಿಂದ ಕೃಷಿಕರು ಕಂಗಾಲಾಗಿದ್ದು, ಈ ಕುರಿತು ಸಂಸದರು, ಶಾಸಕರು ಗಮನ ಹರಿಸಬೇಕು’ ಎಂದರು.</p>.<p>ಸನ್ಮಾನ ಸ್ವೀಕರಿಸಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ‘ಕಳಸದ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳ ಪರಿಹಾರಕ್ಕೆ ಆದ್ಯತೆ ಮೇರೆಗೆ ಕೆಲಸ ಮಾಡುತ್ತೇನೆ’ ಎಂದರು.</p>.<p>ಬಿಜೆಪಿ ಮುಖಂಡ ಸಿ.ಟಿ. ರವಿ ಮಾತನಾಡಿ, ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರ ಮೇಲೆ ತೆರಿಗೆಗಳ ಭಾರ ಹೊರಿಸುತ್ತಿದೆ. ಕಳಸದ ಬೇಡಿಕೆಗಳ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ದನಿ ಎತ್ತುತ್ತೇನೆ’ ಎಂದರು. </p>.<p>ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ನಾಗಭೂಷಣ್, ಶ್ರೀಕಾಂತ್, ಜೆಡಿಎಸ್ ಮುಖಂಡರಾದ ಜ್ವಾಲನಯ್ಯ, ಸಂತೋಷ್, ಮಹೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>