<p>ನರಸಿಂಹರಾಜಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಜನಸಾಮಾನ್ಯರಿಗಾಗಿ ಜಾರಿಗೆ ತಂದ ಕಾರ್ಯಕ್ರಮಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಗ್ರಾಮದಲ್ಲೂ ಮತದಾರರಿಗೆ ತಿಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.</p>.<p>ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.</p>.<p>ಇಂದಿರಾಗಾಂಧಿ ಅವರಿಗೂ ಚಿಕ್ಕಮಗಳೂರು ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ. ಜಿಲ್ಲೆಯು ಅವರಿಗೆ ರಾಜಕೀಯ ಪುನರ್ ಜನ್ಮ ನೀಡಿತ್ತು. ಇಂದಿರಾಗಾಂಧಿ ಅವರು ದಿಟ್ಟ ಮಹಿಳೆಯಾಗಿದ್ದು, ಉಕ್ಕಿನ ಮಹಿಳೆ ಎಂದು ಹೆಸರು ಪಡೆದಿದ್ದರು. ಅವರು ಜಾರಿಗೆ ತಂದ ಕಾರ್ಯಕ್ರಮಗಳನ್ನು ಕಾರ್ಯಕ್ರಮಗಳನ್ನು ಜೀವಂತವಾಗಿಡಬೇಕು ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಈ.ಸಿ.ಜೋಯಿ ಮಾತನಾಡಿ, ಇಂದಿರಾಗಾಂಧಿ ಅವರ ಆದರ್ಶವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿ ಸಂಸ್ಕೃತಿಗಿಂತ ಭಿನ್ನವಾಗಿದೆ. ಇಂದಿರಾಗಾಂಧಿ ಅವರ ಆದರ್ಶ, ಸಿದ್ಧಾಂತವನ್ನು ಜಾರಿಗೆ ತಂದರೆ ಅದು ಅವರಿಗೆ ನೀಡುವ ಗೌರವ ಎಂದರು.</p>.<p>ಕಾಂಗ್ರೆಸ್ ಮುಖಂಡರಾದ ನಹೀಂ, ಕೆ.ಎಂ.ಸುಂದರೇಶ್, ಜುಬೇದ, ಬಿಳಾಲುಮನೆ ಉಪೇಂದ್ರ, ಸಾಜು,ಕೆ.ಎ.ಅಬೂಬಕರ್, ಬೆನ್ನಿ, ಪ್ರಶಾಂತ್ ಶೆಟ್ಟಿ, ಶೋಜಾ, ಮುಕುಂದ, ಕುಮಾರಸ್ವಾಮಿ, ಮುನಾವರ್ ಪಾಷ, ಸುರಯ್ಯಭಾನು, ಯಶೋಧ ಬಾಯಿ, ಅಂಜುಮ್, ಇಮ್ರಾನ್, ಸೂರ್, ಶಿವಣ್ಣ, ಮಂಜು, ಸುಜಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಜನಸಾಮಾನ್ಯರಿಗಾಗಿ ಜಾರಿಗೆ ತಂದ ಕಾರ್ಯಕ್ರಮಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಗ್ರಾಮದಲ್ಲೂ ಮತದಾರರಿಗೆ ತಿಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.</p>.<p>ಇಲ್ಲಿನ ತಾಲ್ಲೂಕು ಕಾಂಗ್ರೆಸ್ ಘಟಕದ ಕಚೇರಿಯಲ್ಲಿ ಶನಿವಾರ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.</p>.<p>ಇಂದಿರಾಗಾಂಧಿ ಅವರಿಗೂ ಚಿಕ್ಕಮಗಳೂರು ಜಿಲ್ಲೆಗೂ ಅವಿನಾಭಾವ ಸಂಬಂಧವಿದೆ. ಜಿಲ್ಲೆಯು ಅವರಿಗೆ ರಾಜಕೀಯ ಪುನರ್ ಜನ್ಮ ನೀಡಿತ್ತು. ಇಂದಿರಾಗಾಂಧಿ ಅವರು ದಿಟ್ಟ ಮಹಿಳೆಯಾಗಿದ್ದು, ಉಕ್ಕಿನ ಮಹಿಳೆ ಎಂದು ಹೆಸರು ಪಡೆದಿದ್ದರು. ಅವರು ಜಾರಿಗೆ ತಂದ ಕಾರ್ಯಕ್ರಮಗಳನ್ನು ಕಾರ್ಯಕ್ರಮಗಳನ್ನು ಜೀವಂತವಾಗಿಡಬೇಕು ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಈ.ಸಿ.ಜೋಯಿ ಮಾತನಾಡಿ, ಇಂದಿರಾಗಾಂಧಿ ಅವರ ಆದರ್ಶವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿ ಸಂಸ್ಕೃತಿಗಿಂತ ಭಿನ್ನವಾಗಿದೆ. ಇಂದಿರಾಗಾಂಧಿ ಅವರ ಆದರ್ಶ, ಸಿದ್ಧಾಂತವನ್ನು ಜಾರಿಗೆ ತಂದರೆ ಅದು ಅವರಿಗೆ ನೀಡುವ ಗೌರವ ಎಂದರು.</p>.<p>ಕಾಂಗ್ರೆಸ್ ಮುಖಂಡರಾದ ನಹೀಂ, ಕೆ.ಎಂ.ಸುಂದರೇಶ್, ಜುಬೇದ, ಬಿಳಾಲುಮನೆ ಉಪೇಂದ್ರ, ಸಾಜು,ಕೆ.ಎ.ಅಬೂಬಕರ್, ಬೆನ್ನಿ, ಪ್ರಶಾಂತ್ ಶೆಟ್ಟಿ, ಶೋಜಾ, ಮುಕುಂದ, ಕುಮಾರಸ್ವಾಮಿ, ಮುನಾವರ್ ಪಾಷ, ಸುರಯ್ಯಭಾನು, ಯಶೋಧ ಬಾಯಿ, ಅಂಜುಮ್, ಇಮ್ರಾನ್, ಸೂರ್, ಶಿವಣ್ಣ, ಮಂಜು, ಸುಜಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>