ಇಲ್ಲಿನ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಅತಿವೃಷ್ಟಿ ಸಮಸ್ಯೆ, ಅಕಾಲಿಕ ಮಳೆಯಿಂದ ರೈತರು ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿದ್ದು, ಇವರ ಸಮಸ್ಯೆಯನ್ನು ಆಲಿಸುವವರಿಲ್ಲ. ಹುಲಿ ಯೋಜನೆ, ಕಸ್ತೂರಿರಂಗನ್ ವರದಿಯಿಂದ ಜನರು ಆತಂಕದಲ್ಲಿದ್ದು, ಇದರ ಬಗ್ಗೆ ಮಾತನಾಡಬೇಕಾದ ಸಂಸದರು, ಬಿಜೆಪಿಯಲ್ಲಿ ಉನ್ನತ ಮಟ್ಟದ ಹುದ್ದೆ ಹೊಂದಿರುವ ಸಿ.ಟಿ.ರವಿ ಅವರು ಮೌನ ವಹಿಸಿದ್ದಾರೆ. ಬಿಜೆಪಿಯವರಿಗೆ ಜನರ ಸಮಸ್ಯೆಗಿಂತಲೂ ರಾಜಕಾರಣ ಮುಖ್ಯವಾಗಿದೆ’ ಎಂದು ದೂರಿದರು.