<p><strong>ಚಿಕ್ಕಮಗಳೂರು</strong>: ‘ಮತ ಕಳವು ಆಗುವುದಿದ್ದರೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯ ಅಳಿಯ ಗೆಲ್ಲುತ್ತಿರಲಿಲ್ಲ. ಚುನಾವಣಾ ಅಕ್ರಮ ಸಾಬೀತಾಗಿರುವ ಡಿಎನ್ಎ ಇರುವುದು ಕಾಂಗ್ರೆಸ್ ಪಕ್ಷಕ್ಕೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.<p>‘ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿರುವ 94 ಚುನಾವಣೆಗಳಲ್ಲಿ ಬೆರಳೆಣಿಕೆಯಷ್ಟು ಗೆದ್ದಿವೆ. ಕಾಂಗ್ರೆಸ್ ಗೆದ್ದರೆ ಪ್ರಜಾಪ್ರಭುತ್ವದ ಗೆಲುವು ಎನ್ನುವುದು, ಸೋತರೆ ಮತ ಕಳುವು ಎನ್ನುವುದು. ಇದು ಹುಚ್ಚಾಸ್ಪತ್ರೆ ರೋಗಿಯ ಮನಸ್ಥಿತಿ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>‘ರಾಹುಲ್ ಗಾಂಧಿ ದಾರಿ ತಪ್ಪಿದ ನಾಯಕ. ಮೂರ್ಖ ನಾಯಕನನ್ನು ಮೂಢರಂತೆ ಆ ಪಕ್ಷದ ಇತರ ನಾಯಕರು ಹಿಂಬಾಲಿಸುತ್ತಿದ್ದಾರೆ. ಅವರು ಕಾಗೆ ಬಿಳಿ ಇದೆ ಎಂದರೆ ಹೌದು ಎಂದು ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಗೋಣಾಡಿಸುತ್ತಿದ್ದಾರೆ. ಇದು ಬುದ್ಧಿವಂತಿಕೆಯ ಲಕ್ಷಣವಲ್ಲ, ಬುದ್ಧಿವಂತಿಕೆಯನ್ನು ಒತ್ತೆ ಇಟ್ಟವರ ಲಕ್ಷಣ’ ಎಂದರು.</p>.<p>‘ಸೈನಿಕರ ವಿರುದ್ಧ ಮಾತನಾಡಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಈಗ ಈ ಪ್ರಕರಣದಲ್ಲಿ ಮತ್ತೊಮ್ಮೆ ಛೀಮಾರಿ ಹಾಕಿಸಿಕೊಳ್ಳುವ ಸಾಧ್ಯತೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ಮತ ಕಳವು ಆಗುವುದಿದ್ದರೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯ ಅಳಿಯ ಗೆಲ್ಲುತ್ತಿರಲಿಲ್ಲ. ಚುನಾವಣಾ ಅಕ್ರಮ ಸಾಬೀತಾಗಿರುವ ಡಿಎನ್ಎ ಇರುವುದು ಕಾಂಗ್ರೆಸ್ ಪಕ್ಷಕ್ಕೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.<p>‘ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿರುವ 94 ಚುನಾವಣೆಗಳಲ್ಲಿ ಬೆರಳೆಣಿಕೆಯಷ್ಟು ಗೆದ್ದಿವೆ. ಕಾಂಗ್ರೆಸ್ ಗೆದ್ದರೆ ಪ್ರಜಾಪ್ರಭುತ್ವದ ಗೆಲುವು ಎನ್ನುವುದು, ಸೋತರೆ ಮತ ಕಳುವು ಎನ್ನುವುದು. ಇದು ಹುಚ್ಚಾಸ್ಪತ್ರೆ ರೋಗಿಯ ಮನಸ್ಥಿತಿ’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>‘ರಾಹುಲ್ ಗಾಂಧಿ ದಾರಿ ತಪ್ಪಿದ ನಾಯಕ. ಮೂರ್ಖ ನಾಯಕನನ್ನು ಮೂಢರಂತೆ ಆ ಪಕ್ಷದ ಇತರ ನಾಯಕರು ಹಿಂಬಾಲಿಸುತ್ತಿದ್ದಾರೆ. ಅವರು ಕಾಗೆ ಬಿಳಿ ಇದೆ ಎಂದರೆ ಹೌದು ಎಂದು ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಗೋಣಾಡಿಸುತ್ತಿದ್ದಾರೆ. ಇದು ಬುದ್ಧಿವಂತಿಕೆಯ ಲಕ್ಷಣವಲ್ಲ, ಬುದ್ಧಿವಂತಿಕೆಯನ್ನು ಒತ್ತೆ ಇಟ್ಟವರ ಲಕ್ಷಣ’ ಎಂದರು.</p>.<p>‘ಸೈನಿಕರ ವಿರುದ್ಧ ಮಾತನಾಡಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಈಗ ಈ ಪ್ರಕರಣದಲ್ಲಿ ಮತ್ತೊಮ್ಮೆ ಛೀಮಾರಿ ಹಾಕಿಸಿಕೊಳ್ಳುವ ಸಾಧ್ಯತೆ ಇದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>