<p><strong>ಚಿಕ್ಕಮಗಳೂರು:</strong> ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಕಾಂಗ್ರೆಸ್ ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಲಹೆ ನೀಡಿದರು.</p>.<p>ನಗರದ ಜಿಲ್ಲಾಕಾಂಗ್ರೆಸ್ ಕಚೇರಿಗೆ ಇತ್ತೀಚೆಗೆ ಬೇಟಿ ನೀಡಿ ಅವರು ಮಾತನಾಡಿದರು.</p>.<p>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಾಗಿದೆ. ಆ ಸೋಲಿನ ನಡುವೆಯೂ ಪಕ್ಷದ ಮುಖಂಡರು, ಕಾರ್ಯಕರ್ತರು ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಗಳಲ್ಲಿ ಕಾಂಗ್ರೆಸ್ ಗೆ ಜನ ಮನ್ನಣೆ ದೊರೆತಿದೆ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಪಟ್ಟಣ ಪಂಚಾಯಿತಿಗಳಲ್ಲಿ ಪಕ್ಷ ಉತ್ತಮ ಪ್ರದರ್ಶನ ತೋರಿದೆ. ಕೊಪ್ಪ ಮತ್ತು ಮೂಡಿಗೆರೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ ಎಂದರು.</p>.<p>ಕಡೂರು ಪುರಸಭೆಯಲ್ಲಿ ಕಾಂಗ್ರೆಸ್ 7 ಸ್ಥಾನ ಪಡೆದಿದೆ. ಜೆಡಿಎಸ್ 6 ಸ್ಥಾನ ಗಳಿಸಿದೆ. ಮೈತ್ರಿ ಮಾಡಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಸ್ಥಳೀಯ ಮುಖಂಡರು ಪ್ರಸ್ತಾಪಿಸಿದ್ದಾರೆ ಎಂದರು.</p>.<p>ಮಾಜಿ ಸಚಿವ ಸಗೀರ್ ಅಹಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಸದಸ್ಯ ಕೆ.ಎಂ.ಮಂಜುನಾಥ್ , ಮುಖಂಡರಾದ ನಿಸಾರ್ ಅಹಮದ್, ರೂಬೆನ್ ಮೊಸೆಸ್, ರೇಖಾಹುಲಿಯಪ್ಪಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಕಾಂಗ್ರೆಸ್ ಕಾರ್ಯಕರ್ತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಲಹೆ ನೀಡಿದರು.</p>.<p>ನಗರದ ಜಿಲ್ಲಾಕಾಂಗ್ರೆಸ್ ಕಚೇರಿಗೆ ಇತ್ತೀಚೆಗೆ ಬೇಟಿ ನೀಡಿ ಅವರು ಮಾತನಾಡಿದರು.</p>.<p>ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲಾಗಿದೆ. ಆ ಸೋಲಿನ ನಡುವೆಯೂ ಪಕ್ಷದ ಮುಖಂಡರು, ಕಾರ್ಯಕರ್ತರು ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಗಳಲ್ಲಿ ಕಾಂಗ್ರೆಸ್ ಗೆ ಜನ ಮನ್ನಣೆ ದೊರೆತಿದೆ ಎಂದರು.</p>.<p>ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಡಿ.ಎಲ್.ವಿಜಯಕುಮಾರ್ ಮಾತನಾಡಿ, ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಪಟ್ಟಣ ಪಂಚಾಯಿತಿಗಳಲ್ಲಿ ಪಕ್ಷ ಉತ್ತಮ ಪ್ರದರ್ಶನ ತೋರಿದೆ. ಕೊಪ್ಪ ಮತ್ತು ಮೂಡಿಗೆರೆಯಲ್ಲಿ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ ಎಂದರು.</p>.<p>ಕಡೂರು ಪುರಸಭೆಯಲ್ಲಿ ಕಾಂಗ್ರೆಸ್ 7 ಸ್ಥಾನ ಪಡೆದಿದೆ. ಜೆಡಿಎಸ್ 6 ಸ್ಥಾನ ಗಳಿಸಿದೆ. ಮೈತ್ರಿ ಮಾಡಿಕೊಂಡು ಆಡಳಿತದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಸ್ಥಳೀಯ ಮುಖಂಡರು ಪ್ರಸ್ತಾಪಿಸಿದ್ದಾರೆ ಎಂದರು.</p>.<p>ಮಾಜಿ ಸಚಿವ ಸಗೀರ್ ಅಹಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ, ಸದಸ್ಯ ಕೆ.ಎಂ.ಮಂಜುನಾಥ್ , ಮುಖಂಡರಾದ ನಿಸಾರ್ ಅಹಮದ್, ರೂಬೆನ್ ಮೊಸೆಸ್, ರೇಖಾಹುಲಿಯಪ್ಪಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>