<p><strong>ಚಿಕ್ಕಮಗಳೂರು:</strong> ಪಕ್ಷದ ನಿಲುವು ಹಾಗೂ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಚಾರ ಸಮಿತಿ ಕೆಲಸ. ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿ ತಳಮಟ್ಟದಿಂದ ಪಕ್ಷ ಬಲಪಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಫ್ ಹೇಳಿದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ಧ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬೂತ್ ಮಟ್ಟದಿಂದ ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು. ಸಾಮಾಜಿಕ ಜಾಲತಾಣ ಸೇರಿ ಗ್ರಾಮಾಂತರ ಮಟ್ಟದಲ್ಲಿ ರಾಜ್ಯ ಸರ್ಕಾರದ ಯೋಜನೆ, ಸಂವಿಧಾನ ಬಗ್ಗೆ ಅರಿವು ಮೂಡಿಸಬೇಕು. ಮುಂಬರುವ ಎಲ್ಲಾ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ತಿಳಿಸಿದರು.</p>.<p>ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲು ಯುವ ಕಾರ್ಯಕರ್ತರಿಗೆ ಕಾರ್ಯಾಗಾರ, ತರಬೇತಿ ಶಿಬಿರ ಆಯೋಜಿಸಿ ಸಮಗ್ರ ತಿಳುವಳಿಕೆ ಮೂಡಿಸಲಾಗುವುದು. ಹೊಸದಾಗಿ ಆಯ್ಕೆಗೊಂಡ ನೂತನ ಪ್ರಚಾರ ಸಮಿತಿ ಮುಖಂಡರು ಎಲ್ಲಾ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಕೆಲಸ ಮಾಡಬೇಕು ಎಂದರು.</p>.<p>ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಎಂ.ಎಸ್.ಅನಂತ ಮಾತನಾಡಿ, ‘ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕ್ರಿಯಾಶೀಲವಾಗಿ ಪ್ರಚಾರ ಸಮಿತಿ ಕೆಲಸ ಮಾಡುತ್ತಿದೆ. ಜವಾಬ್ದಾರಿ ವಹಿಸಿಕೊಂಡು ನೂತನ ಪದಾಧಿಕಾರಿಗಳು ಪಕ್ಷಕ್ಕಾಗಿ ಶ್ರಮಿಸಬೇಕು’ ಎಂದು ತಿಳಿಸಿದರು.</p>.<p>ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನ ಕೊಡುವ ಪದ್ಧತಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಜತೆಗೆ ಪರಿಣಾಮಕಾರಿ ಹಾಗೂ ಅಮೂಲಾಗ್ರ ಬದಲಾವಣೆ ತಂದು ಜನರ ವಿಶ್ವಾಸ ಗಳಿಸುತ್ತಿದೆ ಎಂದರು.</p>.<p>ಜಿಲ್ಲಾ ನೂತನ ಪದಾಧಿಕಾರಿಗಳು: ಸೈಯದ್ ಹನೀಫ್(ಅಧ್ಯಕ್ಷ), ಆರ್.ಚಂದ್ರು, ಹೇಮಲತಾ (ಉಪಾಧ್ಯಕ್ಷರು), ಎಂ.ಮಂಜೇಗೌಡ, ಎಚ್.ಸಿ.ಗಂಗಾಧರ, ಎನ್.ಎನ್.ಪರಮೇಶ್ವರಪ್ಪ, ಲೋಲಾಕ್ಷಿಬಾಯಿ, ನಯೀಮ್ (ಸಂಯೋಜಕರು), ಅನ್ಸರ್ ಆಲಿ (ಖಜಾಂಚಿ), ಸತೀಶ್, ಅಮರ್ ಡಿಸೋಜ, ನಿಂಗೇಗೌಡ, ಸಚಿನ್ ಸಿಂಗ್, ಉಮರ್ (ಜಂಟಿ ಸಂಯೋಜಕರು).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಪಕ್ಷದ ನಿಲುವು ಹಾಗೂ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಪ್ರಚಾರ ಸಮಿತಿ ಕೆಲಸ. ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿ ತಳಮಟ್ಟದಿಂದ ಪಕ್ಷ ಬಲಪಡಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಫ್ ಹೇಳಿದರು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ಧ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬೂತ್ ಮಟ್ಟದಿಂದ ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಬೇಕು. ಸಾಮಾಜಿಕ ಜಾಲತಾಣ ಸೇರಿ ಗ್ರಾಮಾಂತರ ಮಟ್ಟದಲ್ಲಿ ರಾಜ್ಯ ಸರ್ಕಾರದ ಯೋಜನೆ, ಸಂವಿಧಾನ ಬಗ್ಗೆ ಅರಿವು ಮೂಡಿಸಬೇಕು. ಮುಂಬರುವ ಎಲ್ಲಾ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ತಿಳಿಸಿದರು.</p>.<p>ಬೂತ್ ಮಟ್ಟದಿಂದ ಪಕ್ಷ ಸಂಘಟಿಸಲು ಯುವ ಕಾರ್ಯಕರ್ತರಿಗೆ ಕಾರ್ಯಾಗಾರ, ತರಬೇತಿ ಶಿಬಿರ ಆಯೋಜಿಸಿ ಸಮಗ್ರ ತಿಳುವಳಿಕೆ ಮೂಡಿಸಲಾಗುವುದು. ಹೊಸದಾಗಿ ಆಯ್ಕೆಗೊಂಡ ನೂತನ ಪ್ರಚಾರ ಸಮಿತಿ ಮುಖಂಡರು ಎಲ್ಲಾ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಕೆಲಸ ಮಾಡಬೇಕು ಎಂದರು.</p>.<p>ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಎಂ.ಎಸ್.ಅನಂತ ಮಾತನಾಡಿ, ‘ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಕ್ರಿಯಾಶೀಲವಾಗಿ ಪ್ರಚಾರ ಸಮಿತಿ ಕೆಲಸ ಮಾಡುತ್ತಿದೆ. ಜವಾಬ್ದಾರಿ ವಹಿಸಿಕೊಂಡು ನೂತನ ಪದಾಧಿಕಾರಿಗಳು ಪಕ್ಷಕ್ಕಾಗಿ ಶ್ರಮಿಸಬೇಕು’ ಎಂದು ತಿಳಿಸಿದರು.</p>.<p>ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನ ಕೊಡುವ ಪದ್ಧತಿ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಜತೆಗೆ ಪರಿಣಾಮಕಾರಿ ಹಾಗೂ ಅಮೂಲಾಗ್ರ ಬದಲಾವಣೆ ತಂದು ಜನರ ವಿಶ್ವಾಸ ಗಳಿಸುತ್ತಿದೆ ಎಂದರು.</p>.<p>ಜಿಲ್ಲಾ ನೂತನ ಪದಾಧಿಕಾರಿಗಳು: ಸೈಯದ್ ಹನೀಫ್(ಅಧ್ಯಕ್ಷ), ಆರ್.ಚಂದ್ರು, ಹೇಮಲತಾ (ಉಪಾಧ್ಯಕ್ಷರು), ಎಂ.ಮಂಜೇಗೌಡ, ಎಚ್.ಸಿ.ಗಂಗಾಧರ, ಎನ್.ಎನ್.ಪರಮೇಶ್ವರಪ್ಪ, ಲೋಲಾಕ್ಷಿಬಾಯಿ, ನಯೀಮ್ (ಸಂಯೋಜಕರು), ಅನ್ಸರ್ ಆಲಿ (ಖಜಾಂಚಿ), ಸತೀಶ್, ಅಮರ್ ಡಿಸೋಜ, ನಿಂಗೇಗೌಡ, ಸಚಿನ್ ಸಿಂಗ್, ಉಮರ್ (ಜಂಟಿ ಸಂಯೋಜಕರು).</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>