<p><strong>ಅಜ್ಜಂಪುರ</strong>: ‘ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರ ಮೂಲಕ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ’ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಆರೋಪಿಸಿದರು.</p><p>ಬಿಜೆಪಿ-ಜೆಡಿಎಸ್ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳು, ಪಟ್ಟಣದಲ್ಲಿ ಗುರುವಾರ ನಡೆಸಿದ ಪಂಜಿನ ಮೆರವಣಿಗೆಯಲ್ಲಿ ಅವರು ಮಾತನಾಡಿದರು.</p><p>ಬಿಜೆಪಿ, ಜೆಡಿಎಸ್ ಮತ್ತು ಖಾಸಗಿ ವ್ಯಕ್ತಿಗಳು ಸಿದ್ದರಾಮಯ್ಯನವರ ಮೇಲೆ ಹೊರಿಸಿರುವ ಆರೋಪಗಳು ನಿರಾಧಾರ. ‘ಮೂಡಾ ಹಗರಣ’ ಸಿಎಂಗೆ ಮಸಿ ಬಳಿಯಲು ನಡೆಸಿರುವ ಹುನ್ನಾರ. ಪ್ರತಿಪಕ್ಷಗಳ ಆಶಯ ಕೈಗೂಡುವುದಿಲ್ಲ ಎಂದು ತಿರುಗೇಟು ನೀಡಿದರು.</p><p>ಕೆಪಿಸಿಸಿ ಸದಸ್ಯ ಜಿ. ನಟರಾಜ್ ಮಾತನಾಡಿ, ಸಿದ್ದರಾಮಯ್ಯ ತಮ್ಮ 40 ವರ್ಷಗಳ ರಾಜಕಾರಣದಲ್ಲಿ ಪ್ರಾಮಾಣಿಕತೆ ಉಳಿಸಿಕೊಂಡಿದ್ದಾರೆ. ಅವರ ವಿರುದ್ದ ಆರೋಪ ಮಾಡುತ್ತಿರುವ ಬಿಜೆಪಿಯವರು ಭ್ರಷ್ಟಾಚಾರ ಮಾಡಿ, ಜೈಲಿಗೆ ಹೋಗಿ ಬಂದಿದ್ದಾರೆ. ಅಂತಹವರಿಗೆ ಸಿದ್ದರಾಮಯ್ಯ ವಿರುದ್ದ ಮಾತನಾಡುವ ನೈತಿಕತೆ ಇಲ್ಲ ಎಂದರು.</p><p> ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ‘ಸಿದ್ದರಾಮಯ್ಯ ಹಿಂದುಳಿದವರ ನಾಯಕ. ಬಡವರ ಪರ ಗ್ಯಾರಂಟಿ ಯೋಜನೆ ಜಾರಿಗೊಳಿಸಿ, ಮಾತು ಉಳಿಸಿಕೊಂಡಿದ್ದಾರೆ. ಇದನ್ನು ಸಹಿಸಲಾಗದೆ, ಅವರ ವಿರುದ್ಧ ಬಿಜೆಪಿ-ಜೆಡಿಎಸ್ ಸುಳ್ಳು ಆರೋಪ ಮಾಡುತ್ತಿವೆ’ ಎಂದರು.</p><p> ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಗುರುಮೂರ್ತಿ, ಮುಖಂಡ ಗಡೀಹಳ್ಳಿ ಮಂಜುನಾಥ್, ಕೃಷ್ಣಪ್ಪ, ರಾಘವೇಂದ್ರ, ರಿಯಾಜ್ ಅಹಮದ್, ಜೋಗಿ ಪ್ರಕಾಶ್, ಬಂಗನಗಟ್ಟೆ ರಾಜಣ್ಣ ಇದ್ದರು. </p><p> ಗಾಂಧಿವೃತ್ತದಿಂದ ಪಂಜಿನ ಮೆರವಣಿಗೆಯಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತ ನೆಹರೂ ವೃತ್ತ, ಸಿದ್ದರಾಮೇಶ್ವರ ವೃತ್ತದ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ</strong>: ‘ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರ ಮೂಲಕ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ’ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಆರೋಪಿಸಿದರು.</p><p>ಬಿಜೆಪಿ-ಜೆಡಿಎಸ್ ಪಾದಯಾತ್ರೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳು, ಪಟ್ಟಣದಲ್ಲಿ ಗುರುವಾರ ನಡೆಸಿದ ಪಂಜಿನ ಮೆರವಣಿಗೆಯಲ್ಲಿ ಅವರು ಮಾತನಾಡಿದರು.</p><p>ಬಿಜೆಪಿ, ಜೆಡಿಎಸ್ ಮತ್ತು ಖಾಸಗಿ ವ್ಯಕ್ತಿಗಳು ಸಿದ್ದರಾಮಯ್ಯನವರ ಮೇಲೆ ಹೊರಿಸಿರುವ ಆರೋಪಗಳು ನಿರಾಧಾರ. ‘ಮೂಡಾ ಹಗರಣ’ ಸಿಎಂಗೆ ಮಸಿ ಬಳಿಯಲು ನಡೆಸಿರುವ ಹುನ್ನಾರ. ಪ್ರತಿಪಕ್ಷಗಳ ಆಶಯ ಕೈಗೂಡುವುದಿಲ್ಲ ಎಂದು ತಿರುಗೇಟು ನೀಡಿದರು.</p><p>ಕೆಪಿಸಿಸಿ ಸದಸ್ಯ ಜಿ. ನಟರಾಜ್ ಮಾತನಾಡಿ, ಸಿದ್ದರಾಮಯ್ಯ ತಮ್ಮ 40 ವರ್ಷಗಳ ರಾಜಕಾರಣದಲ್ಲಿ ಪ್ರಾಮಾಣಿಕತೆ ಉಳಿಸಿಕೊಂಡಿದ್ದಾರೆ. ಅವರ ವಿರುದ್ದ ಆರೋಪ ಮಾಡುತ್ತಿರುವ ಬಿಜೆಪಿಯವರು ಭ್ರಷ್ಟಾಚಾರ ಮಾಡಿ, ಜೈಲಿಗೆ ಹೋಗಿ ಬಂದಿದ್ದಾರೆ. ಅಂತಹವರಿಗೆ ಸಿದ್ದರಾಮಯ್ಯ ವಿರುದ್ದ ಮಾತನಾಡುವ ನೈತಿಕತೆ ಇಲ್ಲ ಎಂದರು.</p><p> ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ‘ಸಿದ್ದರಾಮಯ್ಯ ಹಿಂದುಳಿದವರ ನಾಯಕ. ಬಡವರ ಪರ ಗ್ಯಾರಂಟಿ ಯೋಜನೆ ಜಾರಿಗೊಳಿಸಿ, ಮಾತು ಉಳಿಸಿಕೊಂಡಿದ್ದಾರೆ. ಇದನ್ನು ಸಹಿಸಲಾಗದೆ, ಅವರ ವಿರುದ್ಧ ಬಿಜೆಪಿ-ಜೆಡಿಎಸ್ ಸುಳ್ಳು ಆರೋಪ ಮಾಡುತ್ತಿವೆ’ ಎಂದರು.</p><p> ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಗುರುಮೂರ್ತಿ, ಮುಖಂಡ ಗಡೀಹಳ್ಳಿ ಮಂಜುನಾಥ್, ಕೃಷ್ಣಪ್ಪ, ರಾಘವೇಂದ್ರ, ರಿಯಾಜ್ ಅಹಮದ್, ಜೋಗಿ ಪ್ರಕಾಶ್, ಬಂಗನಗಟ್ಟೆ ರಾಜಣ್ಣ ಇದ್ದರು. </p><p> ಗಾಂಧಿವೃತ್ತದಿಂದ ಪಂಜಿನ ಮೆರವಣಿಗೆಯಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತ ನೆಹರೂ ವೃತ್ತ, ಸಿದ್ದರಾಮೇಶ್ವರ ವೃತ್ತದ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>