<p><strong>ಚಿಕ್ಕಮಗಳೂರು: </strong>ಮತಗಳನ್ನು ಮರು ಎಣಿಕೆ ಮಾಡುವಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಎಣಿಕೆ ಕೇಂದ್ರ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಬೇಲೂರು ರಸ್ತೆಯ ಎಸ್ಟಿಜೆ ಕಾಲೇಜಿನ ಮುಂದಿನ ಮಾರ್ಗದಲ್ಲಿ ಸೇರಿದ್ದ ಪ್ರತಿಭಟನಾಕಾರರು ಮರು ಎಣಿಕೆಗೆ ಒತ್ತಾಯಿಸಿದರು. ಎಣಿಕೆ ಕೇಂದ್ರದೊಳಕ್ಕೆ ನುಗ್ಗಲು ಯತ್ನಿಸಿದರು.</p>.<p>ಪೊಲೀಸರು ಕಾಲೇಜಿನ ಪ್ರವೇಶ ದ್ವಾರದ ಗೇಟನ್ನು ಮುಚ್ಚಿದ್ದರು. ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಕಾರರು ನುಗ್ಗದಂತೆ ತಡೆಯೊಡ್ಡಿದರು.</p>.<p>ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಅವರು ಮುಖಂಡರೊಂದಿಗೆ ಮಾತನಾಡಿ ಸಮಾಧಾನಪಡಿಸಿದರು.</p>.<p>ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಕಾರ್ಯಕರ್ತರೂ ಘೋಷಣೆಗಳನ್ನು ಕೂಗಿದರು.</p>.<p class="Briefhead">ಬೇಲೂರು ರಸ್ತೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಮುಖಂಡರು ಕಿಕ್ಕಿರಿದು ಜಮಾಯಿಸಿದ್ದರು. ಹಾವು – ಏಣಿ ಆಟದಲ್ಲಿ ಕೊನೆಗೂ ಬಿಜೆಪಿ ಅಭ್ಯರ್ಥಿಗೆ ಗೆಲುವು ಒಲಿದು ಬಂತು.</p>.<p><strong>‘ಫಲಿತಾಂಶ ಘೋಷಣೆ– ತಡೆಗೆ ಮನವಿ’</strong><br />ನಾಮನಿರ್ದೇಶನ ಸದಸ್ಯರ ಮತಗಳ ತಕರಾರು ವಿಚಾರ ಕೋರ್ಟ್ನಲ್ಲಿದೆ. ಹೀಗಾಗಿ, ಚುನಾವಣೆ ಫಲಿತಾಂಶ ತಡೆಹಿಡಿಯುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ ಎಂದು ವಕೀಲ ಪುಟ್ಟೇಗೌಡ<br />ತಿಳಿಸಿದರು.</p>.<p>‘ಹುಯಿಗೆರೆ ಮತಗಟ್ಟೆಯಲ್ಲಿ ಮಾದರಿ ಮತಪತ್ರವನ್ನು ಹಾಕಿ, ಮೂಲಪತ್ರವನ್ನು ಒಯ್ಯಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದೇವೆ. ಮತಗಳ ಮರು ಎಣಿಕೆಗೆ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಕಾಂಗ್ರೆಸ್ ಮುಖಂಡ ಎ.ಎನ್.ಮಹೇಶ್<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಮತಗಳನ್ನು ಮರು ಎಣಿಕೆ ಮಾಡುವಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಎಣಿಕೆ ಕೇಂದ್ರ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಬೇಲೂರು ರಸ್ತೆಯ ಎಸ್ಟಿಜೆ ಕಾಲೇಜಿನ ಮುಂದಿನ ಮಾರ್ಗದಲ್ಲಿ ಸೇರಿದ್ದ ಪ್ರತಿಭಟನಾಕಾರರು ಮರು ಎಣಿಕೆಗೆ ಒತ್ತಾಯಿಸಿದರು. ಎಣಿಕೆ ಕೇಂದ್ರದೊಳಕ್ಕೆ ನುಗ್ಗಲು ಯತ್ನಿಸಿದರು.</p>.<p>ಪೊಲೀಸರು ಕಾಲೇಜಿನ ಪ್ರವೇಶ ದ್ವಾರದ ಗೇಟನ್ನು ಮುಚ್ಚಿದ್ದರು. ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಕಾರರು ನುಗ್ಗದಂತೆ ತಡೆಯೊಡ್ಡಿದರು.</p>.<p>ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ಅವರು ಮುಖಂಡರೊಂದಿಗೆ ಮಾತನಾಡಿ ಸಮಾಧಾನಪಡಿಸಿದರು.</p>.<p>ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಕಾರ್ಯಕರ್ತರೂ ಘೋಷಣೆಗಳನ್ನು ಕೂಗಿದರು.</p>.<p class="Briefhead">ಬೇಲೂರು ರಸ್ತೆಯಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಮುಖಂಡರು ಕಿಕ್ಕಿರಿದು ಜಮಾಯಿಸಿದ್ದರು. ಹಾವು – ಏಣಿ ಆಟದಲ್ಲಿ ಕೊನೆಗೂ ಬಿಜೆಪಿ ಅಭ್ಯರ್ಥಿಗೆ ಗೆಲುವು ಒಲಿದು ಬಂತು.</p>.<p><strong>‘ಫಲಿತಾಂಶ ಘೋಷಣೆ– ತಡೆಗೆ ಮನವಿ’</strong><br />ನಾಮನಿರ್ದೇಶನ ಸದಸ್ಯರ ಮತಗಳ ತಕರಾರು ವಿಚಾರ ಕೋರ್ಟ್ನಲ್ಲಿದೆ. ಹೀಗಾಗಿ, ಚುನಾವಣೆ ಫಲಿತಾಂಶ ತಡೆಹಿಡಿಯುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ ಎಂದು ವಕೀಲ ಪುಟ್ಟೇಗೌಡ<br />ತಿಳಿಸಿದರು.</p>.<p>‘ಹುಯಿಗೆರೆ ಮತಗಟ್ಟೆಯಲ್ಲಿ ಮಾದರಿ ಮತಪತ್ರವನ್ನು ಹಾಕಿ, ಮೂಲಪತ್ರವನ್ನು ಒಯ್ಯಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದೇವೆ. ಮತಗಳ ಮರು ಎಣಿಕೆಗೆ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಕಾಂಗ್ರೆಸ್ ಮುಖಂಡ ಎ.ಎನ್.ಮಹೇಶ್<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>