‘ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ದುಡಿದಿದ್ದೆ. ಆದರೆ, ಆ ಪಕ್ಷಗಳು ತಮ್ಮನ್ನು ಬಳಸಿಕೊಂಡು ತಮಗೆ ಟಿಕೆಟ್ ನೀಡದೆ ತಾರತಮ್ಯ ಮಾಡಿವೆ. ಇದೀಗ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟರ ಕಲ್ಯಾಣದ ಗುರಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷ ಸೇರಿದ್ದೇನೆ. ಪಕ್ಷದ ವರಿಷ್ಠರು ಸೂಚಿಸಿದ ಕೆಲಸವನ್ನು ಸ್ಥಳೀಯ ಮುಖಂಡರೊಂದಿಗೆ ಸೇರಿ ಮಾಡುತ್ತೇನೆ. ಪಕ್ಷ ಸಂಘಟನೆಯ ಜೊತೆಗೆ ಇದೀಗ ವಿಧಾನ ಪರಿಷತ್ ಅಭ್ಯರ್ಥಿಯಾಗಿರುವ ಗಾಯತ್ರಿ ಶಾಂತೇಗೌಡ ಅವರ ಗೆಲುವಿಗೆ ಪೂರ್ಣ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದ್ದಾರೆ.