<p><strong>ತರೀಕೆರೆ</strong>: ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಣಸಘಟ್ಟ ಗ್ರಾಮದ ಎಚ್.ಎಂ. ಗೋಪಿಕೃಷ್ಣ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.</p>.<p>ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಪತ್ನಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಸೂಯ ಅವರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.</p>.<p>‘ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ದುಡಿದಿದ್ದೆ. ಆದರೆ, ಆ ಪಕ್ಷಗಳು ತಮ್ಮನ್ನು ಬಳಸಿಕೊಂಡು ತಮಗೆ ಟಿಕೆಟ್ ನೀಡದೆ ತಾರತಮ್ಯ ಮಾಡಿವೆ. ಇದೀಗ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟರ ಕಲ್ಯಾಣದ ಗುರಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷ ಸೇರಿದ್ದೇನೆ. ಪಕ್ಷದ ವರಿಷ್ಠರು ಸೂಚಿಸಿದ ಕೆಲಸವನ್ನು ಸ್ಥಳೀಯ ಮುಖಂಡರೊಂದಿಗೆ ಸೇರಿ ಮಾಡುತ್ತೇನೆ. ಪಕ್ಷ ಸಂಘಟನೆಯ ಜೊತೆಗೆ ಇದೀಗ ವಿಧಾನ ಪರಿಷತ್ ಅಭ್ಯರ್ಥಿಯಾಗಿರುವ ಗಾಯತ್ರಿ ಶಾಂತೇಗೌಡ ಅವರ ಗೆಲುವಿಗೆ ಪೂರ್ಣ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ</strong>: ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಣಸಘಟ್ಟ ಗ್ರಾಮದ ಎಚ್.ಎಂ. ಗೋಪಿಕೃಷ್ಣ ಅವರು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.</p>.<p>ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ತಮ್ಮ ಪತ್ನಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಸೂಯ ಅವರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.</p>.<p>‘ಜೆಡಿಎಸ್ ಹಾಗೂ ಬಿಜೆಪಿಯಲ್ಲಿ ಕಾರ್ಯಕರ್ತನಾಗಿ ದುಡಿದಿದ್ದೆ. ಆದರೆ, ಆ ಪಕ್ಷಗಳು ತಮ್ಮನ್ನು ಬಳಸಿಕೊಂಡು ತಮಗೆ ಟಿಕೆಟ್ ನೀಡದೆ ತಾರತಮ್ಯ ಮಾಡಿವೆ. ಇದೀಗ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟರ ಕಲ್ಯಾಣದ ಗುರಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷ ಸೇರಿದ್ದೇನೆ. ಪಕ್ಷದ ವರಿಷ್ಠರು ಸೂಚಿಸಿದ ಕೆಲಸವನ್ನು ಸ್ಥಳೀಯ ಮುಖಂಡರೊಂದಿಗೆ ಸೇರಿ ಮಾಡುತ್ತೇನೆ. ಪಕ್ಷ ಸಂಘಟನೆಯ ಜೊತೆಗೆ ಇದೀಗ ವಿಧಾನ ಪರಿಷತ್ ಅಭ್ಯರ್ಥಿಯಾಗಿರುವ ಗಾಯತ್ರಿ ಶಾಂತೇಗೌಡ ಅವರ ಗೆಲುವಿಗೆ ಪೂರ್ಣ ಪ್ರಯತ್ನ ಮಾಡುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>