ಚಿಕ್ಕಮಗಳೂರು: ಜಿಲ್ಲಾಡಳಿತ ವಿಧಿಸಿರುವ ಮಾರ್ಗಸೂಚಿಗಳನ್ನು ಪ್ರವಾಸಿಗರು ಪಾಲಿಸುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗ ಜಿಲ್ಲಾ ಘಟಕದವರು ತಾಲ್ಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಪ್ರತಿಭಟನೆ ನಡೆಸಿದರು.
ಕೈಮರ ಚೆಕ್ ಪೋಸ್ಟ್ ಬಳಿ ಪ್ರವಾಸಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಹಳಷ್ಟು ಪ್ರವಾಸಿಗರು ಕೋವಿಡ್ ನೆಗೆಟಿವ್ (ಆರ್ಟಿ-ಪಿಸಿಆರ್) ವರದಿ ತರುತ್ತಿಲ್ಲ, ಗುಂಪುಗುಂಪಾಗಿ ಓಡಾಡುತ್ತಾರೆ, ಹಲವರು ಮುಖಗವುಸನ್ನು ಧರಿಸಿರುವುದಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.