<p><strong>ಚಿಕ್ಕಮಗಳೂರು</strong>: ಎರಡು ಗುಂಪುಗಳ ಘರ್ಷಣೆ ನಡುವೆ ನಡೆದ ಘರ್ಷಣೆಯಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಗಣೇಶಗೌಡ(38) ಹತ್ಯೆಯಾಗಿದ್ದಾರೆ.</p><p>ಬ್ಯಾನರ್ ಹಾಕಿದ್ದ ವಿಚಾರಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತು ಗಣೇಶ್ ನಡುವೆ ಶುಕ್ರವಾರ ಜಗಳ ನಡೆದಿತ್ತು. ತಡರಾತ್ರಿ ಕಲ್ಮುರುಡೇಶ್ಚರ ಮಠದ ಬಳಿ ಅವರನ್ನು ಕರೆಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಗಣೇಶ್ ಸಂಬಂಧಿಕರು ಆರೋಪಿಸಿದ್ದಾರೆ.</p><p>ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಗಣೇಶ್ ಆಕಾಂಕ್ಷಿಯಾಗಿದ್ದರು. ಘರ್ಷಣೆಯಲ್ಲಿ ಎದುರಾಳಿ ಗುಂಪಿನ ಇಬ್ಬರಿಗೆ ಗಾಯಗಳಾಗಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.</p><p>‘ಗಣೇಶ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸಖರಾಯಪಟ್ಟಣ ಭಾಗದಲ್ಲಿ ಪಕ್ಷ ಸಂಘಟಿಸಿದ್ದರು. ಅವರನ್ನು ಕೊಲೆ ಮಾಡಿರುವ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಬಂಧಿಸಿ ಶಿಕ್ಷೆ ಕೊಡಿಸಬೇಕು’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಎರಡು ಗುಂಪುಗಳ ಘರ್ಷಣೆ ನಡುವೆ ನಡೆದ ಘರ್ಷಣೆಯಲ್ಲಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಗಣೇಶಗೌಡ(38) ಹತ್ಯೆಯಾಗಿದ್ದಾರೆ.</p><p>ಬ್ಯಾನರ್ ಹಾಕಿದ್ದ ವಿಚಾರಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತು ಗಣೇಶ್ ನಡುವೆ ಶುಕ್ರವಾರ ಜಗಳ ನಡೆದಿತ್ತು. ತಡರಾತ್ರಿ ಕಲ್ಮುರುಡೇಶ್ಚರ ಮಠದ ಬಳಿ ಅವರನ್ನು ಕರೆಸಿಕೊಂಡು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಗಣೇಶ್ ಸಂಬಂಧಿಕರು ಆರೋಪಿಸಿದ್ದಾರೆ.</p><p>ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಗಣೇಶ್ ಆಕಾಂಕ್ಷಿಯಾಗಿದ್ದರು. ಘರ್ಷಣೆಯಲ್ಲಿ ಎದುರಾಳಿ ಗುಂಪಿನ ಇಬ್ಬರಿಗೆ ಗಾಯಗಳಾಗಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.</p><p>‘ಗಣೇಶ್ ಅವರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಸಖರಾಯಪಟ್ಟಣ ಭಾಗದಲ್ಲಿ ಪಕ್ಷ ಸಂಘಟಿಸಿದ್ದರು. ಅವರನ್ನು ಕೊಲೆ ಮಾಡಿರುವ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಬಂಧಿಸಿ ಶಿಕ್ಷೆ ಕೊಡಿಸಬೇಕು’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>