ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿರುವೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
ತನಿಖೆಗೆ ಸೂಚನೆ: ಜಾರ್ಜ್
‘ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಘಟನೆ ಅತೀವ ನೋವು ತಂದಿದೆ. ಕಟ್ಟುನಿಟ್ಟಿನ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ‘ಶಾಂತಿಯುತವಾಗಿ ದತ್ತ ಜಯಂತಿಗೆ ಎಲ್ಲರೂ ಶ್ರಮ ವಹಿಸಿದ್ದಾರೆ. ಬಳಿಕ ಈ ಘಟನೆ ನಡೆದಿರುವುದು ಬೇಸರ ತಂದಿದೆ. ಗಣೇಶ್ಗೌಡ ಹತ್ಯೆ ಪಕ್ಷಕ್ಕೂ ನಷ್ಟ ತಂದಿದೆ’ ಎಂದರು.