ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ತನಿಖಾ ತಂಡವು ಚಿಕ್ಕಮಗಳೂರಿನ ಕೈಮರ ಸಮೀಪದ ಬಾನ್ ಆಫ್ ಬೆರ್ರಿ ಹೋಂ ಸ್ಟೇನಲ್ಲಿ ಶನಿವಾರ ಪರಿಶೀಲನೆ ನಡೆಸಿದ್ದಾರೆ.
ತನಿಖಾ ತಂಡದವರು ಹೋಂ ಸ್ಟೇ ನೌಕರರಿಂದ ಮಾಹಿತಿ ಕಲೆ ಹಾಕಿದ್ದಾರೆ. ಯಾವ್ಯಾವ ತಾಣಗಳಿಗೆ ಭೇಟಿ ನೀಡಿದ್ದರು ಎಂಬ ವಿವರ ಪಡೆದಿದ್ದಾರೆ.
‘ಸಂತೋಷ್ ಅವರು ಎಷ್ಟು ದಿನ ತಂಗಿದ್ದರು ಮತ್ತು ಅವರ ಚಲನವಲನಗಳ ಕುರಿತು ಪೊಲೀಸರು ಮಾಹಿತಿ ಪಡೆದುಕೊಂಡರು. ಸಂತೋಷ್ ಜೊತೆ ತಂಗಿದ್ದ ಒಬ್ಬರನ್ನು ಕರೆ ತಂದಿದ್ದರು’ ಎಂದು ಹೋಂ ಸ್ಟೇ ನೌಕರರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.