ಶಿವಶಂಕರ್ ಅವರು ಐದು ವರ್ಷಗಳ ಹಿಂದೆ ಚಾಲಕರಾಗಿ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ಈಗ ಸ್ಯಾನಿಟೈಸ್ ಮಾಡುವ ಕೆಲಸ ನಿರ್ವಹಿಸುತ್ತಿದ್ದಾರೆ. ಅಗತ್ಯ ಸಂದರ್ಭದಲ್ಲಿ ಪಟ್ಟಣದ ಸರ್ಕಾರಿ ಕಚೇರಿಗಳು, ಬಸ್ ನಿಲ್ದಾಣ, ಸಾರ್ವಜನಿಕ ಪ್ರದೇಶಗಳು, ಪಟ್ಟಣದ ಗಲ್ಲಿಗಳು, ಪೊಲೀಸ್ ಠಾಣೆ, ನ್ಯಾಯಾಲಯ, ಪರೀಕ್ಷಾ ಕೇಂದ್ರಗಳು ಸೇರಿದಂತೆ ಅಜ್ಜಂಪುರ ತಾಲ್ಲೂಕಿನ ಸರ್ಕಾರಿ ಕಚೇರಿಗಳು, ವಸತಿ ಶಾಲೆಗಳು ಹಾಗೂ ಜನವಸತಿ ಪ್ರದೇಶಗಳನ್ನು ಸ್ಯಾನಿಟೈಸ್ ಮಾಡಿದ್ದಾರೆ. ಕೊರೊನಾ ವಾರಿಯರ್ಸ್ಗಳನ್ನು ನಾಗರಿಕರು ಅಭಿನಂದಿಸಿ ಸನ್ಮಾನಿಸುತ್ತಿದ್ದರೆ ಅವರು ಮಾತ್ರ ಸಹಾಯಕರೊಂದಿಗೆ ಬೀದಿಗಳ ಸುತ್ತಿ ಕೀಟನಾಶಕ ಸಿಂಪರಣೆಯಲ್ಲಿ ಮಗ್ನರಾಗಿದ್ದಾರೆ.