‘ಇದೀಗ ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಮುಚ್ಚಲಾಗಿದೆ. ಡಿಗ್ರೂಪ್ ನೌಕರರ ನೇಮಕಾತಿಯಾಗಿಲ್ಲ. ಸಾರ್ವಜನಿಕ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಪಟ್ಟಣದ ಪೂರ್ಣಕೋವಿಡ್ ಆಸ್ಪತ್ರೆಯನ್ನಾಗಿ ಮಾಡಬೇಕು. ಭದ್ರಾವತಿಯಿಂದ ಆಮ್ಲಜನಕ ಪೂರೈಕೆಯಾಗುತ್ತಿದ್ದು ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸಬೇಕು. ಪಟ್ಟಣದ ಆಯುಷ್ ಆಸ್ಪತ್ರೆಯನ್ನು ಸಾಮಾನ್ಯ ರೋಗಗಳ ಪರೀಕ್ಷೆಗೆ ಬಳಸಿಕೊಳ್ಳುವಂತೆ’ ಅವರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.