ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಇಬ್ಬರು ಸಾವು, 113 ಮಂದಿಗೆ ದೃಢ

Last Updated 9 ಆಗಸ್ಟ್ 2020, 16:41 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್‌–19ನಿಂದಾಗಿ ಇಬ್ಬರು ಭಾನುವಾರ ಸಾವಿಗೀಡಾಗಿದ್ದಾರೆ. 113 ಮಂದಿಗೆ ಸೋಂಕು ದೃಢಪಟ್ಟಿದೆ, 20 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಖರಾಯಪಟ್ಟಣದ 58 ವರ್ಷದ ಮಹಿಳೆ ಹಾಗೂ ತರೀಕೆರೆ ತ್ಯಾಗರಾಜನಗರದ 57 ವರ್ಷದ ಪುರುಷ ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 40, ಕಡೂರು– 34, ತರೀಕೆರೆ– 22, ಮೂಡಿಗೆರೆ– 8, ಅಜ್ಜಂಪುರ– 7 ಹಾಗೂ ಶೃಂಗೇರಿ– ಇಬ್ಬರಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 884 ಸಕ್ರಿಯ ಪ್ರಕರಣಗಳು ಇವೆ. ಈವರೆಗೆ 634 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 33 ಮಂದಿ (ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಸಾವಿಗೀಡಾಗಿದ್ದಾರೆ. ಜಿಲ್ಲೆಯ ವಿವಿಧೆಡೆ 487 ನಿಯಂತ್ರಿತ ವಲಯ(ಕಂಟೈನ್‌ಮೆಂಟ್‌ ಝೋನ್‌)ಗಳು ಇವೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1569ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಾಣು ಸೋಂಕು ಪರೀಕ್ಷೆ ನಿಟ್ಟಿನಲ್ಲಿ ಭಾನುವಾರ 210 ಮಂದಿಯ ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸಲಾಗಿದೆ.

ಭಾನುವಾರ ಬಂದಿರುವ ವರದಿಯಲ್ಲಿ 146 ಮಂದಿಗೆ ನೆಗೆಟಿವ್‌ ಬಂದಿದೆ. ಇನ್ನು 586 ಮಂದಿಯ ವರದಿ ಬರಬೇಕಿದೆ. 193 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ.ಮಂಜುನಾಥ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT