<p>ಚಿಕ್ಕಮಗಳೂರು: ಕೊರೊನಾ ವೈರಾಣು ಪತ್ತೆ ಪರೀಕ್ಷೆಗೆ ಮಾದರಿಗಳನ್ನು ಪ್ರಯೋಗಾಲಯಕ್ಕೆ ಒಯ್ಯುತ್ತಿದ್ದ ನೌಕರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸಹಿತ ಆರು ಮಂದಿಗೆ ಗುರುವಾರ ಕೋವಿಡ್ ದೃಢ ಪಟ್ಟಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 60ಕ್ಕೆ ಏರಿದೆ.</p>.<p>ಚಿಕ್ಕಮಗಳೂರು ತಾಲ್ಲೂಕಿನಲ್ಲಿ ನಾಲ್ವರು, ಶೃಂಗೇರಿ ತಾಲ್ಲೂಕಿನ ಒಬ್ಬರು ಮತ್ತು ತರೀಕೆರೆ ತಾಲ್ಲೂಕಿನ ಒಬ್ಬರು ಸೋಂಕು ಪತ್ತೆಯಾಗಿದೆ. ಆರು ಮಂದಿ ಪೈಕಿ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದ್ದಾರೆ.</p>.<p>ಈವರೆಗಿನ ಒಟ್ಟು ಪ್ರಕರಣಗಳು ಸಂಖ್ಯೆ 129ಕ್ಕೆ ತಲುಪಿದೆ.</p>.<p>ನಿಯಂತ್ರಿತ ವಲಯ (ಕಂಟೈನ್ಮೆಂಟ್) : ನಗರದ ರಾಂಪುರದ ಚಿಂತಾಮಣಿ ದೇವಸ್ಥಾನದ ಬಳಿ, ಕಲ್ಯಾಣ ನಗರದ ವಾಟರ್ ಟ್ಯಾಂಕ್ ಬಳಿ, ಪೈ ಕಾಂಪೌಂಡ್ನ ಜನತಾ ಸ್ಟೋರ್ ಪ್ರದೇಶಗಳನ್ನು ನಿಯಂತ್ರಿತ ವಲಯವನ್ನಾಗಿ ಘೋಷಿಸಲಾಗಿದೆ.</p>.<p>ಸರ್ವೇಕ್ಷಣಾ ವಿಭಾಗ ವ್ಯಾಪ್ತಿಯಲ್ಲೂ ನಿಗಾ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಕೊರೊನಾ ವೈರಾಣು ಪತ್ತೆ ಪರೀಕ್ಷೆಗೆ ಮಾದರಿಗಳನ್ನು ಪ್ರಯೋಗಾಲಯಕ್ಕೆ ಒಯ್ಯುತ್ತಿದ್ದ ನೌಕರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸಹಿತ ಆರು ಮಂದಿಗೆ ಗುರುವಾರ ಕೋವಿಡ್ ದೃಢ ಪಟ್ಟಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 60ಕ್ಕೆ ಏರಿದೆ.</p>.<p>ಚಿಕ್ಕಮಗಳೂರು ತಾಲ್ಲೂಕಿನಲ್ಲಿ ನಾಲ್ವರು, ಶೃಂಗೇರಿ ತಾಲ್ಲೂಕಿನ ಒಬ್ಬರು ಮತ್ತು ತರೀಕೆರೆ ತಾಲ್ಲೂಕಿನ ಒಬ್ಬರು ಸೋಂಕು ಪತ್ತೆಯಾಗಿದೆ. ಆರು ಮಂದಿ ಪೈಕಿ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದ್ದಾರೆ.</p>.<p>ಈವರೆಗಿನ ಒಟ್ಟು ಪ್ರಕರಣಗಳು ಸಂಖ್ಯೆ 129ಕ್ಕೆ ತಲುಪಿದೆ.</p>.<p>ನಿಯಂತ್ರಿತ ವಲಯ (ಕಂಟೈನ್ಮೆಂಟ್) : ನಗರದ ರಾಂಪುರದ ಚಿಂತಾಮಣಿ ದೇವಸ್ಥಾನದ ಬಳಿ, ಕಲ್ಯಾಣ ನಗರದ ವಾಟರ್ ಟ್ಯಾಂಕ್ ಬಳಿ, ಪೈ ಕಾಂಪೌಂಡ್ನ ಜನತಾ ಸ್ಟೋರ್ ಪ್ರದೇಶಗಳನ್ನು ನಿಯಂತ್ರಿತ ವಲಯವನ್ನಾಗಿ ಘೋಷಿಸಲಾಗಿದೆ.</p>.<p>ಸರ್ವೇಕ್ಷಣಾ ವಿಭಾಗ ವ್ಯಾಪ್ತಿಯಲ್ಲೂ ನಿಗಾ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>