ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗಳವಾರ 69 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, 86 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 28, ತರೀಕೆರೆ– 24, ಕೊಪ್ಪ– 11, ಎನ್.ಆರ್.ಪುರ, ಕಡೂರು ತಲಾ ಮೂವರಿಗೆ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ 1299 ಸಕ್ರಿಯ ಪ್ರಕರಣಗಳು ಇವೆ. 5853 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 110ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 2091 ನಿಯಂತ್ರಿತ ವಲಯಗಳು ಇವೆ.
675 ಮಂದಿ ಮಾದರಿ ಸಂಗ್ರಹ
ಕೊರೊನಾ ವೈರಾಣು ಪರೀಕ್ಷೆ ನಿಟ್ಟಿನಲ್ಲಿ ಮಂಗಳವಾರ 675 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಮಂಗಳವಾರದ ವರದಿಯಲ್ಲಿ 1450 ಮಂದಿಗೆ ನೆಗೆಟಿವ್ ಬಂದಿದೆ.
1465ಮಾದರಿಗಳ ಪರೀಕ್ಷೆ ವರದಿ ಬರಬೇಕಿದೆ. 595 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್ನಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ತಿಳಿಸಿದ್ದಾರೆ.