ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್–19ನಿಂದಾಗಿ ನಾಲ್ವರು ಭಾನುವಾರ ಸಾವಿಗೀಡಾಗಿದ್ದಾರೆ. 69 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನ 56 ವರ್ಷದ ಪುರುಷ, 77 ವರ್ಷದ ಮಹಿಳೆ, ಕಡೂರು ತಾಲ್ಲೂಕಿನ 62ವರ್ಷದ ಪುರುಷ, 50ವರ್ಷದ ಮಹಿಳೆ ಮೃತಪಟ್ಟವರು. ಮೂವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ 799 ಸಕ್ರಿಯ ಪ್ರಕರಣಗಳು ಇವೆ. 1,323 ಮಂದಿ ಗುಣಮುಖರಾಗಿದ್ದಾರೆ. 49 ಮಂದಿ (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಮೃತಪಟ್ಟಿದ್ದಾರೆ.
ಜಿಲ್ಲೆಯ ವಿವಿಧೆಡೆ 459 ನಿಯಂತ್ರಿತ ವಲಯ (ಕಂಟೈನ್ಮೆಂಟ್ ಝೋನ್) ಗಳು ಇವೆ.