ಚಿಕ್ಕಮಗಳೂರು: ಕೋವಿಡ್-19 ಸೋಂಕು ತಗುಲಿದ್ದ ಒಬ್ಬರು ಸಾವಿಗೀಡಾಗಿದ್ದಾರೆ. ಶುಕ್ರವಾರ115 ಮಂದಿಗೆ ಸೋಂಕು ದೃಢಪಟ್ಟಿದ್ದು, 50 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕ್ಕಮಗಳೂರಿನ ವಿಜಯನಗರದ 46 ವರ್ಷದ ಮಹಿಳೆ (ಪಿ–502314) ಮೃತಪಟ್ಟವರು.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಕಡೂರು– 49, ತರೀಕೆರೆ– 30, ಚಿಕ್ಕಮಗಳೂರು– 25, ಮೂಡಿಗೆರೆ– 7, ಕೊಪ್ಪ– ನಾಲ್ಕು ಮಂದಿಗೆ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ 1471 ಸಕ್ರಿಯ ಪ್ರಕರಣಗಳು ಇವೆ. 5292 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 107 ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 2091 ನಿಯಂತ್ರಿತ ವಲಯಗಳು ಇವೆ.