ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಭಾನುವಾರ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 18ಕ್ಕೆ ಏರಿದೆ. 61 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಐವರು ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಡೂರಿನ 58 ವರ್ಷದ ಪುರುಷ ಮೃತಪಟ್ಟವರು. ತಾಲ್ಲೂಕುವಾರು ಚಿಕ್ಕಮಗಳೂರು– 18, ಕಡೂರು– 30, ತರೀಕೆರೆ–12 ಮೂಡಿಗೆರೆಯ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಫಿನಾಡಿನಲ್ಲಿ ಸಕ್ರಿಯ ಪ್ರಕರಣಗಳು 278 ಇವೆ. ಈವರೆಗಿನ ಒಟ್ಟಾರೆ ಪ್ರಕರಣಗಳ ಸಂಖ್ಯೆ 677ಕ್ಕೆ ತಲುಪಿದೆ. ಈವರೆಗೆ 376 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.